-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪ್ರೀತಿ ನಿರಾಕರಿಸಿದ್ದಕ್ಕೆ ಮಾರಕಾಯುಧದಿಂದ ಇರಿದು ಯುವತಿಯ ಕೊಲೆ

ಪ್ರೀತಿ ನಿರಾಕರಿಸಿದ್ದಕ್ಕೆ ಮಾರಕಾಯುಧದಿಂದ ಇರಿದು ಯುವತಿಯ ಕೊಲೆ


ಮುಂಬೈ: ಪ್ರೀತಿ ನಿರಾಕರಣೆ ಮಾಡಿದ್ದಾಳೆಂಬ ಕುಪಿತಗೊಂಡ ಯುವಕನೊಬ್ಬ ಹದಿನೆಂಟರ ಯುವತಿಯನ್ನು ಮಾರಕಾಯುಧದಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್​ ಜಿಲ್ಲೆಯಲ್ಲಿ ನಡೆದಿದೆ.

ಅರ್ಚನಾ ಲಕ್ಷ್ಮಣ್​ ಉದಾರ್ (18) ಮೃತಪಟ್ಟ ದುರ್ದೈವಿ. ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ಯುವತಿಗೆ ತನ್ನನ್ನು ಪ್ರೀತಿಸುವಂತೆ ಬಹಳ ತಿಂಗಳುಗಳಿಂದ ದುಂಬಾಲು ಬಿದ್ದಿದ್ದ. ಆರೋಪಿ ತನ್ನ ಪೋಷಕರೊಂದಿಗೆ ಯುವತಿಯ ಮನೆಗೆ ತೆರಳಿ ಮದುವೆ ಮಾಡಿಕೊಡುವಂತೆ ಪ್ರಸ್ತಾಪಿಸಿದ್ದ. ಆದರೆ, ಯುವತಿಯ ಮನೆಯವರು ಪ್ರಸ್ತಾಪವನ್ನು ತಿರಸ್ಕರಿಸಿದ್ದರು.

ಇದರಿಂದ ಕುಪಿತಗೊಂಡಿದ್ದ ಆರೋಪಿ ಆಕೆಯ ಕೊಲೆ ಮಾಡಲು ಸಂಚು ರೂಪಿಸಿದ್ದ. ಅದರಂತೆ ಶುಕ್ರವಾರ ಮಧ್ಯಾಹ್ನ 12:30 ಸುಮಾರಿಗೆ ಯುವತಿ ತರಗತಿ ಮುಗಿಸಿಕೊಂಡು ಊಟಕ್ಕೆ ತೆರಳುವ ವೇಳೆ ಅಡ್ಡಗಟ್ಟಿದ್ದಾನೆ. ಬಳಿಕ ಆತ ಏಕಾಏಕಿ ಆಕೆಯ ಮೇಲೆ ಮಾರಕಾಯುಧದಿಂದ ದಾಳಿ ಮಾಡಲು ಶುರು ಮಾಡಿದ್ದಾನೆ. ಯುವತಿ ಸಹಾಯಕ್ಕೆಂದು ಕೂಗಿಕೊಂಡಾಗ ಭಯಗೊಂಡ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ತಕ್ಷಣ ಯುವತಿಯ ಅಲ್ಲಿದದವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಆರೋಪಿ ತಲೆಮರೆಸಿಕೊಂಡಿದ್ದು, ಆತನನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article