-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹಿಂದಿ ಬಿಗ್​ ಬಾಸ್​ ಸೀಸನ್​-2 ವಿನ್ನರ್​ ಆಯೋಜಿಸಿರುವ ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ: ಐವರು ಅರೆಸ್ಟ್

ಹಿಂದಿ ಬಿಗ್​ ಬಾಸ್​ ಸೀಸನ್​-2 ವಿನ್ನರ್​ ಆಯೋಜಿಸಿರುವ ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ: ಐವರು ಅರೆಸ್ಟ್


ನೋಯ್ಡಾ: ಉತ್ತರಪ್ರದೇಶದ ನೋಯ್ಡಾದಲ್ಲಿ ರೇವ್​ ಪಾರ್ಟಿ ಆಯೋಜಿಸಿರುವ ಆರೋಪದಲ್ಲಿ ಹಿಂದಿ ಬಿಗ್​ ಬಾಸ್​ ಸೀಸನ್​-2 ವಿನ್ನರ್​ ಎಲ್ವಿಶ್​ ಯಾದವ್ ಸೇರಿದಂತೆ ಆರು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಐವರನ್ನು ವಶಕ್ಕೆ ಪಡೆದಿದ್ದಾರೆ.

ರೇವ್​ ಪಾರ್ಟಿ ಆಯೋಜನೆ ಹಾಗೂ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ ಮಾಡಿದ್ದಕ್ಕೆ ಪೊಲೀಸರು ಪ್ರಕರಣದಲ್ಲಿ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸೂರಜ್​ಪುರ ಮ್ಯಾಜಿಸ್ಟ್ರೇಟ್​ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಐವರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಎಲ್ವಿಶ್​ ಯಾದವ್​ನನ್ನು ಪೊಲೀಸರು ಈವರೆಗೆ ಬಂಧಿಸಿಲ್ಲ. ಇದು  ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಈತ ಉತ್ತರಪ್ರದೇಶ ಹಾಗೂ ಹರಿಯಾಣದ ಪ್ರಭಾವಿ ನಾಯಕರ ಜತೆ ಒಡನಾಟ ಹೊಂದಿದ್ದು, ಹರಿಯಾಣ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್​, ಕೇಂದ್ರ ಸಚಿವೆಯರಾದ ಸ್ಮೃತಿ ಇರಾನಿ, ನಿರ್ಮಲಾ ಸೀತಾರಾಮನ್​ ಅವರೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಎಲ್ವಿಶ್​ ವಿರುದ್ಧ ಸಾಕಷ್ಟು ಕ್ರಿಮಿನಲ್​ ಮೊಕದ್ದಮೆಗಳು ದಾಖಲಾಗಿದ್ದು, ಪ್ರಭಾವಿಗಳು ಈತನ ಬೆನ್ನಿಗೆ ನಿಂತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಹಲವು ಪ್ರಶ್ನೆಗಳು ಉದ್ಭವಿಸಿವೆ.

Ads on article

Advertise in articles 1

advertising articles 2

Advertise under the article

ಸುರ