-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
29 ಮಂದಿಗೆ ಕಚ್ಚಿದ್ದ ಶ್ವಾನಕ್ಕೆ ರೇಬಿಸ್

29 ಮಂದಿಗೆ ಕಚ್ಚಿದ್ದ ಶ್ವಾನಕ್ಕೆ ರೇಬಿಸ್


ಚೆನ್ನೈ: ತಮಿಳುನಾಡಿನ ಚೆನ್ನೈಯಲ್ಲಿ 29 ಮಂದಿಯನ್ನು ಕಚ್ಚಿದ್ದಕ್ಕಾಗಿ ಸಾರ್ವಜನಿಕರು ಹೊಡೆದು ಕೊಂದ ಶ್ವಾನದಿಂದ ಸಂಗ್ರಹಿಸಿದ ಮಾದರಿಯಲ್ಲಿ ರೇಬಿಸ್ ಪಾಸಿಟಿವ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಇದು ಎಲ್ಲರನ್ನೂ ಆತಂಕಕ್ಕೀಡುಮಾಡಿದೆ. ಚೆನ್ನೈಯ ರಾಯುರಂನಲ್ಲಿ ಶ್ವಾನವೊಂದು 29 ಮಂದಿಯನ್ನು ಕಚ್ಚಿತ್ತು ಈ ಹಿನ್ನೆಲೆಯಲ್ಲಿ ಮಂಗಳವಾರ ಸಿಟ್ಟಿಗೆದ್ದ ಜನರು ಶ್ವಾನವನ್ನು ಕೊಂದುಹಾಕಿದ್ದರು.


 ಬಳಿಕ ಕಾರ್ಪೊರೇಶನ್ ಅಧಿಕಾರಿಗಳು ಅದರ ಮಾದರಿ ಸಂಗ್ರಹಿಸಿ ಪರೀಕ್ಷಿಸಿದ್ದು ರೇಬಿಸ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶ್ವಾನ ಕಚ್ಚಿದ ಪ್ರತಿಯೊಬ್ಬರನ್ನೂ ಸಂಪರ್ಕಿಸಿ ರೇಬಿಸ್ ಚುಚ್ಚುಮದ್ದು ಪಡೆಯಲು ಸೂಚಿಸಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ