ಆ್ಯಂಬುಲೆನ್ಸ್ ನಲ್ಲಿ ಏಳು ಮಂದಿಯ ಧರ್ಮಸ್ಥಳ, ಉಡುಪಿ ಟ್ರಿಪ್ : ಚಾಲಕನಿಗೆ 4,500 ರೂ‌. ದಂಡ ವಿಧಿಸಿದ ಪೊಲೀಸರು


ಬೆಳ್ತಂಗಡಿ: ತನ್ನ ಆರು ಮಂದಿ ಸ್ನೇಹಿತರೊಂದಿಗೆ ಆಂಬುಲೆನ್ಸ್ ನಲ್ಲಿಯೇ ಚಾಲಕನೊಬ್ಬ ಬೆಂಗಳೂರಿನಿಂದ ಧರ್ಮಸ್ಥಳ, ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೊರಟಿದ್ದ. ಆತ ಕೊಟ್ಟಿಗೆಹಾರ ಮಾರ್ಗವಾಗಿ ಉಜಿರೆಗೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ಅವರು ದಂಡ ವಿಧಿಸಿದ್ದಾರೆ.

ಬೆಂಗಳೂರಿನಿಂದ ಚಾರ್ಮಾಡಿ ಮೂಲಕ ಉಜಿರೆಯೆಡೆಗೆ ಆಂಬುಲೆನ್ಸ್ ನಲ್ಲಿ ಒಟ್ಟು ಏಳು ಮಂದಿ ಬರುತ್ತಿದ್ದ ಮಾಹಿತಿ ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯ ಸಬ್ ಇನ್ಸೆಕ್ಟರ್ ಅರ್ಜುನ್ ಅವರಿಗೆ ಮಾಹಿತಿ ಬಂದಿದೆ. ತಕ್ಷಣ ತಮ್ಮ ಠಾಣೆಯ ಸಿಬ್ಬಂದಿ ಸುನಿಲ್ ನನ್ನು ಉಜಿರೆ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ.

ಆಂಬುಲೆನ್ಸ್ ಅನ್ನು ಠಾಣೆಗೆ ಕರೆಸಿ ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರೊಂದಿಗೆ ದೇವಸ್ಥಾನ ಟ್ರಿಪ್ ಮಾಡುತ್ರಿರುವುದು ತಿಳಿದು ಬಂದಿದೆ. ಆದ್ದರಿಂದ ಸಂಚಾರಿ ಪೊಲೀಸರು ಚಾಲಕನಿಗೆ 4,500 ರೂ. ದಂಡ ವಿಧಿಸಿದ್ದಾರೆ.