-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ನಾಳೆ ದೇಶದ 8ಕೋಟಿಗೂ ಅಧಿಕ ಮಂದಿಯ ಖಾತೆಗೆ ಜಮೆಯಾಗಲಿದೆ 18 ಸಾವಿರ ಕೋಟಿ ರೂ.

ನಾಳೆ ದೇಶದ 8ಕೋಟಿಗೂ ಅಧಿಕ ಮಂದಿಯ ಖಾತೆಗೆ ಜಮೆಯಾಗಲಿದೆ 18 ಸಾವಿರ ಕೋಟಿ ರೂ.

ನವದೆಹಲಿ: ನಾಳೆ ದೇಶದ 8 ಕೋಟಿಗೂ ಅಧಿಕ ಮಂದಿಯ ಬ್ಯಾಂಕ್ ಖಾತೆಗೆ 18 ಸಾವಿರ ಕೋಟಿ ರೂಪಾಯಿ ಜಮೆ ಆಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಖುದ್ದಾಗಿ ಈ ಹಣ ಬಿಡುಗಡೆ ಮಾಡಲಿದ್ದಾರೆ.

ಜಾರ್ಖಾಂಡ್‌ನ ಖುಂಟಿಯ ಬಿರ್ಸಾ ಕಾಲೇಜಿನಲ್ಲಿ ನಾಳೆ ನಡೆಯಲಿರುವ ‘ಬುಡಕಟ್ಟು ಹೆಮ್ಮೆಯ ದಿನ’ದ ಸಂದರ್ಭ ಮೋದಿಯವರು ಪಿಎಂ-ಕಿಸಾನ್ ಯೋಜನೆಯ 15ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಅವರು ಬಟನ್ ಕ್ಲಿಕ್ ಮಾಡುತ್ತಿದ್ದಂತೆ 8 ಕೋಟಿಗಿಂತ ಅಧಿಕ ಮಂದಿ ರೈತರ 15ನೇ ಕಂತಿನ ಬಾಬ್ತು ಒಟ್ಟು 18,000 ಕೋಟಿ ರೂ. ಸ್ವೀಕರಿಸಲಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ವಿಶ್ವದ ಅತಿದೊಡ್ಡ ನೇರ ಲಾಭ ವರ್ಗಾವಣೆ ಯೋಜನೆಗಳಲ್ಲಿ ಒಂದಾಗಿದೆ. ಈ ಕಂತಿನ ಬಿಡುಗಡೆಯೊಂದಿಗೆ ಈ ಯೋಜನೆಯ ಪ್ರಾರಂಭದಿಂದ ಇದುವರೆಗೆ ಬಿಡುಗಡೆಯಾದ ಒಟ್ಟು ಮೊತ್ತ 2.8 ಲಕ್ಷ ಕೋಟಿ ರೂ. ಮೊತ್ತವನ್ನು ದಾಟಲಿದೆ.

ನಿಗದಿತ ಮಾನದಂಡಕ್ಕೆ ಒಳಪಟ್ಟ ಎಲ್ಲ ರೈತರ ಆರ್ಥಿಕ ಅಗತ್ಯಗಳನ್ನು ಪೂರೈಸಲು 2019ರ ಫೆ. 24ರಂದು ಈ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಸಮಾನ ಕಂತುಗಳಲ್ಲಿ ವರ್ಷಕ್ಕೆ 6 ಸಾವಿರ ರೂ. ಆರ್ಥಿಕ ಲಾಭವನ್ನು ನೇರ ಲಾಭ ವರ್ಗಾವಣೆ (ಡಿಬಿಟಿ) ಮೋಡ್ ಮೂಲಕ ದೇಶಾದ್ಯಂತ ರೈತರ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಈ ವರೆಗೆ ದೇಶಾದ್ಯಂತ 11 ಕೋಟಿಗೂ ಹೆಚ್ಚು ರೈತರಿಗೆ 2.61 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಪ್ರಯೋಜನ ಈ ಮೂಲಕ ಒದಗಿಸಲಾಗಿದೆ.

Ads on article

Advertise in articles 1

advertising articles 2

Advertise under the article