-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಉಡುಪಿ: ಒಂದೇ ಮನೆಯ ನಾಲ್ವರ ಹತ್ಯೆ ಮಾಡಿದ ಶಂಕಿತ ಹಂತಕ ಬೆಳಗಾವಿಯಲ್ಲಿ ವಶಕ್ಕೆ

ಉಡುಪಿ: ಒಂದೇ ಮನೆಯ ನಾಲ್ವರ ಹತ್ಯೆ ಮಾಡಿದ ಶಂಕಿತ ಹಂತಕ ಬೆಳಗಾವಿಯಲ್ಲಿ ವಶಕ್ಕೆ

ಉಡುಪಿ: ಇಲ್ಲಿನ ನೇಜಾರಿನ ಒಂದೇ ನಾಲ್ವರನ್ನು ಹತ್ಯೆ ಮಾಡಿರುವ ಶಂಕಿತ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿಯ ಕುಡುಚಿಯಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಮಹಾರಾಷ್ಟ್ರ ಸಾಂಗ್ಲಿ ಮೂಲದ ಆರೋಪಿ ಪ್ರವೀಣ್​​​​ ಅರುಣ್​​​ ಚೌಗಲೆ ಬಂಧಿತ ಆರೋಪಿ. ಈತ ಮಂಗಳೂರು ಏರ್​ಪೋರ್ಟ್​ನಲ್ಲಿ​ ಸೆಕ್ಯೂರಿಟಿ ಕೆಲಸ ಮಾಡ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಶಂಕೆಯ ಮೇರೆಗೆ ಈತನನ್ನು ಅರೆಸ್ಟ್ ಮಾಡಲಾಗಿದೆ.

ಪ್ರವೀಣ್​​​​ ಅರುಣ್​​​ ಚೌಗಲೆ ನೀರಾವರಿ ಇಲಾಖೆಯ ಅಧಿಕಾರಿಯ ಸಂಬಂಧಿಯಾಗಿದ್ದ. ಇವರ ಕುಡಚಿಯ ಮನೆಯಲ್ಲಿಯೇ ಪ್ರವೀಣ್ ಅಡಗಿ ಕುಳಿತಿದ್ದ ​ಎನ್ನಲಾಗಿದೆ. ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಆರೋಪಿಯನ್ನು  ಬಂಧಿಸಲಾಗಿದೆ.​​ ಉಡುಪಿಗೆ ಆರೋಪಿಯನ್ನು ಕರೆ ತರಲಾಗುತ್ತಿದೆ ಎಂಬ ಮಾಹಿತಿಯಿದೆ‌. ಆದರೆ ಈವರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿರುವ ಬಗ್ಗೆ ಖಚಿತಪಡಿಸಿಲ್ಲ.

Ads on article

Advertise in articles 1

advertising articles 2

Advertise under the article