-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಗಗನಸಖಿಯೊಂದಿಗೆ ಅಸಭ್ಯ ವರ್ತನೆ - ವಿಮಾನ ಪ್ರಯಾಣಿಕ ಅರೆಸ್ಟ್

ಗಗನಸಖಿಯೊಂದಿಗೆ ಅಸಭ್ಯ ವರ್ತನೆ - ವಿಮಾನ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಜೈಪುರದಿಂದ ಬೆಂಗಳೂರಿಗೆ ಆಗಮಿದುತ್ತಿದ್ದ ಇಂಡಿಗೊ ವಿಮಾನದ ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ರಾಜಸ್ಥಾನದ ಸಿರ್ಕಾ ಜಿಲ್ಲೆಯ ರವೀಂದರ್‌ ಸಿಂಗ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 

ಪಾನಮತ್ತನಾಗಿದ್ದ ಪ್ರಯಾಣಿಕ ರವೀಂದರ್ ಸಿಂಗ್ ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಬಗ್ಗೆ ಎಚ್ಚರಿಕೆ ನೀಡಿದ ಬಳಿಕವೂ ಆತ ಪದೇಪದೇ ಗಗನಸಖಿಯ ಕೈ ಹಿಡಿದು ಕಿರುಕುಳ ನೀಡಿದ್ದಾನೆ ಎಂದು ಇಂಡಿಗೊ ಅಧಿಕಾರಿ ವರುಣ್ ಕುಮಾ‌ರ್ ಹೇಳಿದ್ದಾರೆ.

ಈತನ ಅಸಭ್ಯ ವರ್ತನೆಯನ್ನು ಗಮನಿಸಿದ ಸಹ ಪ್ರಯಾಣಿಕ, ಇತರ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ವಿಮಾನದ ಕ್ಯಾಪ್ಟನ್, ಈತನನ್ನು ಅಶಿಸ್ತಿನ ಪ್ರಯಾಣಿಕ ಎಂದು ಘೋಷಿಸಿದ್ದಾರೆ. ವಿಮಾನ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಿದ ಬಳಿಕ ವಿಮಾನ ಸಿಬ್ಬಂದಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.ಇಂಡಿಗೊ ಅಧಿಕಾರಿ ವರುಣ್ ಕುಮಾ‌ರ್ ಈ ಘಟನೆಯನ್ನು ಶನಿವಾರ ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಅಧಿಕೃತವಾಗಿ ವರದಿ ಮಾಡಿದ್ದು, ಆರೋಪಿ ಸಿಂಗ್ ನನ್ನು ಭಾನುವಾರ ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇರೆಗೆ ಬಿಡುಗಡೆ ಮಾಡಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ