-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸಂತಾನ ಭಾಗ್ಯ ಬಯಸಿದ್ದ ಮಹಿಳೆಯ ಹತ್ಯೆ - ದೇವಾಲಯದ ಅರ್ಚಕ ಅರೆಸ್ಟ್

ಸಂತಾನ ಭಾಗ್ಯ ಬಯಸಿದ್ದ ಮಹಿಳೆಯ ಹತ್ಯೆ - ದೇವಾಲಯದ ಅರ್ಚಕ ಅರೆಸ್ಟ್

ಸೇಲಂ: ವಿವಾಹಿತೆಯೊಬ್ಬಳನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಸೇಲಂನ ದೇವಸ್ಥಾನವೊಂದರ ಅರ್ಚಕನನ್ನು ಪೋಲಿಸರು ಶನಿವಾರ ಬಂಧಿಸಿದ್ದಾರೆ.

ಸೆಲ್ವಿ (28) ಎಂಬಾಕೆ ಹತ್ಯೆಯಾಗಿರುವ ಮಹಿಳೆ. ಸಿವತಪುರ ನಿವಾಸಿ ದೇವಾಲಯದ ಅರ್ಚಕ ವಿ.ಕುಮಾರ (42) ಬಂಧಿತ ಆರೋಪಿ.

ಸೆಲ್ವಿಗೆ ವಿವಾಹವಾಗಿ ಒಂಬತ್ತು ವರ್ಷಳಾಗಿದ್ದರೂ ಮಕ್ಕಳಾಗಿರಲಿಲ್ಲ. ಆದ್ದರಿಂದ ಆಕೆ ಸಂತಾನ ಭಾಗ್ಯವನ್ನು ಕೋರಿ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದರು. ಬಂಧಿತ ಆರೋಪಿ ವಿ.ಕುಮಾರ (42) ಸಿವತಪುರಂ ತನ್ನದೇ ಜಮೀನಿನಲ್ಲಿ 20 ವರ್ಷಗಳ ಹಿಂದೆ ಪೆರಿಯಾಂಡಿಚಿ ಅಮ್ಮನ್ ದೇವಸ್ಥಾನವನ್ನು ನಿರ್ಮಿಸಿದ್ದ. ಅಲ್ಲಿ ಅರ್ಚಕನಾಗಿ ಸ್ವತಃ ಕಾರ್ಯ ನಿರ್ವಹಿಸುತ್ತಿದ್ದ.

ಅ.15ರಂದು ಸ್ನೇಹಿತೆಯನ್ನು ಭೇಟಿಯಾಗಲು ತೆರಳುತ್ತಿರುವುದಾಗಿ ತಿಳಿಸಿ ಮನೆಯಿಂದ ಬಂದಿದ್ದ ಸೆಲ್ವಿ ಬಳಿಕ ನಾಪತ್ತೆಯಾಗಿದ್ದಳು. ಆಕೆಯ ಮೊಬೈಲ್ ಫೋನ್ ಕೂಡ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ. ಈ ಬಗ್ಗೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಸೆಲ್ವಿಯ ಪತಿ ಪಸುವರಾಜ್ ಗುರುವಾರ ಥರಮಂಗಲಂ ಪೋಲಿಸ್ ಠಾಣೆಗೆ ದೂರು ನೀಡಿದ್ದರು. ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ವಿ.ಕುಮಾರನ ದೇವಸ್ಥಾನದ ಬಳಿಯ ಪೊದೆಯೊಂದರಲ್ಲಿ ಸೆಲ್ವಿ ಶವವನ್ನು ಪತ್ತೆ ಹಚ್ಚಿದ್ದಾರೆ.

ಒಂದು ವಾರಕ್ಕೂ ಅಧಿಕ ಸಮಯದಿಂದ ಸೆಲ್ವಿ ಈ ದೇವಸ್ಥಾನಕ್ಕೆ ಹೋಗುತ್ತಿದ್ದಳು ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆಕೆಯೊಂದಿಗೆ ಸಲಿಗೆ ಬೆಳೆಸಿಕೊಂಡಿದ್ದ ಕುಮಾರ ದೈಹಿಕ ಸಂಪರ್ಕವನ್ನು ಬಯಸಿದ್ದ. ಆದರೆ ಆಕೆ ಅದಕ್ಕೆ ನಿರಾಕರಿಸಿದ್ದರಿಂದ ಹತ್ಯೆ ಮಾಡಿದ್ದಾನೆ ಎಂದು ಪೋಲಿಸರು ಶಂಕಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ