-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮೋದಿ ಮಾತು ಕೇಳಿ ಕೆಟ್ಟೆ- BJP ಮುಖಂಡ ಸೋಮಣ್ಣ

ಮೋದಿ ಮಾತು ಕೇಳಿ ಕೆಟ್ಟೆ- BJP ಮುಖಂಡ ಸೋಮಣ್ಣ


ರಾಜ್ಯ ಬಿಜೆಪಿ ನಾಯಕರ  ವಿರುದ್ದ ಮುನಿಸಿ ಕೊಂಡಿರುವ ಮಾಜಿ ಸಚಿವ ವಿ. ಸೋಮಣ್ಣ ಅವರು ಈಗ ತಮ್ಮ ಆಕ್ರೋಶವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವ್ಯಕ್ತಪಡಿಸಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಿದ್ದಲಿಂಗ ಸ್ವಾಮೀಜಿ ಗಳನ್ನು ಶನಿವಾರ ಭೇಟಿ ಮಾಡಿ ಆಶೀರ್ವಾದ ಪಡೆದ ಸಂದರ್ಭದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಬಂದು ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು. ಎರಡು ತಾಸು ಮನೆಯಲ್ಲಿ ಕುಳಿತುಕೊಂಡಿದ್ದರು. ಏನೂ ಮಾಡಲಾಗಲಿಲ್ಲ. ಪ್ರಧಾನಿ ಮೋದಿಯವರು ದಿಲ್ಲಿಗೆ ಕರೆಸಿ ಕೊಂಡು ನಾಲ್ಕು ದಿನ ಇರಿಸಿಕೊಂಡು ಚುನಾವಣೆಗೆ ನಿಂತುಕೋ ಎಂದಿದ್ದು ಅನಿವಾರ್ಯವಾಗಿ ಒಪ್ಪಿ ಕೊಳ್ಳಬೇಕಾಯಿತು ಎಂದು ಬೇಸರದಿಂದ ಹೇಳಿದ್ದಾರೆ. 

ಎರಡು ಕಡೆ ಸ್ಪರ್ಧೆ ಮಾಡಿದ್ದಕ್ಕೆ ನನಗೆ ಬೇಸರವಾಗಿದೆ. ಸ್ವಕ್ಷೇತ್ರ ಬಿಟ್ಟು ಬೇರೆ ಕಡೆ ಸ್ಪರ್ಧಿಸಿ ಮಹಾ ಅಪರಾಧವಾಗಿದೆ ಎಂದು ಸ್ವಾಮೀಜಿಯಲ್ಲಿ ಹೇಳಿದರು.

ದಿಲ್ಲಿಗೆ ದೂರು

ಈ ನಡುವೆ ಸೋಮಣ್ಣ ಡಿ. 6ರ ಬಳಿಕ ಹೊಸದಿಲ್ಲಿಗೆ ತೆರಳಲು ತೀರ್ಮಾನಿಸಿದ್ದಾರೆ. ಡಿ. 7, 8 ಮತ್ತು 9ರಂದು ಪಕ್ಷದ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಅರವಿಂದ ಲಿಂಬಾವಳಿ, ರಮೇಶ್ ಜಾರಕಿಹೊಳಿ ಅವರೊಂದಿಗೆ ತೆರಳುವುದಾಗಿ ಹೇಳಿದರು.

Ads on article

Advertise in articles 1

advertising articles 2

Advertise under the article