-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ -  ಹಂತಕನ ಪದವಿನಂಗಡಿ ಮನೆಯಲ್ಲಿ ಸ್ಥಳ ಮಹಜರು

ಮಂಗಳೂರು: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ - ಹಂತಕನ ಪದವಿನಂಗಡಿ ಮನೆಯಲ್ಲಿ ಸ್ಥಳ ಮಹಜರು


ಮಂಗಳೂರು: ಉಡುಪಿಯ ನೇಜಾರಿನಲ್ಲಿ ತಾಯಿ ಹಾಗೂ ಮೂವರು ಮಕ್ಕಳ ಹತ್ಯೆ ಮಾಡಿರುವ ಪ್ರಕರಣದ ಹಂತಕ ಪ್ರವೀಣ್ ಅರುಣ್ ಚೌಗುಲೆಯನ್ನು ಮಂಗಳೂರಿಗೆ ಕರೆತಂದ ಉಡುಪಿ ಪೊಲೀಸರು ನಗರದ ಪದವಿನಂಗಡಿಯಲ್ಲಿರುವ ಆತನ ನಿವಾಸದಲ್ಲಿ ಸ್ಥಳ ಮಹಜರು ಪ್ರಕ್ರಿಯೆ ನಡೆಸಿದರು.

ಆರೋಪಿ ನಾಲ್ವರ ಹತ್ಯೆಗೆ ಬಳಸಿರುವ ಚಾಕು ಈವರೆಗೆ ಪತ್ತೆಯಾಗಿಲ್ಲ. ಅದಕ್ಕಾಗಿ ಪೊಲೀಸರ‌ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದ್ದರಿಂದ ಮಂಗಳೂರಿನ ಪದವಿನಂಗಡಿಯಲ್ಲಿರುವ ನಿವಾಸಕ್ಕೆ ಪ್ರವೀಣ್ ಅರುಣ್ ಚೌಗುಲೆಯನ್ನು ಉಡುಪಿ ಪೊಲೀಸರು ಕರೆ ತಂದಿದ್ದಾರೆ.  ಪ್ರಕರಣದ ತನಿಖಾಧಿಕಾರಿ, ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಆರೋಪಿ ವಾಸವಿದ್ದ ಮನೆಯಲ್ಲಿ ಮಹಜರು ಪ್ರಕ್ರಿಯೆ‌ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article