-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ವಿಧಾನಸಭೆಯ ವಿಪಕ್ಷ ನಾಯಕರಾಗಿ ಆರ್.ಅಶೋಕ್ ಆಯ್ಕೆ

ವಿಧಾನಸಭೆಯ ವಿಪಕ್ಷ ನಾಯಕರಾಗಿ ಆರ್.ಅಶೋಕ್ ಆಯ್ಕೆ

ಬೆಂಗಳೂರು: ಬಹಳಷ್ಟು ಕಾಲದಿಂದ ನನೆಗುದಿಗೆ ಬಿದಿದ್ದ ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ತೆರೆಬಿದ್ದಂತಾಗಿದೆ. ಹೌದು ಆರ್. ಅಶೋಕ ಅವರನ್ನು ವಿಪಕ್ಷ ನಾಯಕರನ್ನಾಗಿ ಬಿಜೆಪಿ ಆರಿಸಿದ್ದು, ಈ ಮೂಲಕ ರಾಜ್ಯ ರಾಜಕೀಯದಲ್ಲಿನ ಮಹತ್ವದ ಬೆಳವಣಿಗೆ ಇಂದು ನಡೆದಿದೆ. ಈ ಕುರಿತು ಮಾಜಿ ಸಚಿವ ಗೋಪಾಲಯ್ಯ ಅವರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರ ಆಯ್ಕೆಯ ವಿಚಾರದಲ್ಲಿ ರಾಜ್ಯ ಬಿಜೆಪಿ ಕಳೆದ ಕೆಲವು ದಿನಗಳಿಂದ ತೀವ್ರ ವಾಗ್ದಾಳಿ ಎದುರಿಸಿತ್ತು. ಇತ್ತೀಚೆಗಷ್ಟೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಿದ ಬೆನ್ನಿಗೇ ಇದೀಗ ವಿಪಕ್ಷ ನಾಯಕನ ಆಯ್ಕೆ ಮಾಡಿ ವಿರೋಧಪಕ್ಷಗಳ ಬಾಯಿಯನ್ನು ಒಂದು ಹಂತಕ್ಕೆ ಮುಚ್ಚಿಸಿದೆ. ಬಿಜೆಪಿ ವಿರೋಧಪಕ್ಷದ ನಾಯಕರ ಆಯ್ಕೆ ಸಲುವಾಗಿ ಕೇಂದ್ರದಿಂದ ವೀಕ್ಷಕರಾಗಿ ಬಂದಿದ್ದ ನಿರ್ಮಲಾ ಸೀತಾರಾಮನ್​ ಉಪಸ್ಥಿತಿಯಲ್ಲಿ ಇಂದು ಬಿಜೆಪಿ ಶಾಸಕಾಂಗ ಸಭೆ ನಡೆದಿದ್ದು, ಈ ಸಭೆಯಲ್ಲಿ ವಿಪಕ್ಷ ನಾಯಕರ ಆಯ್ಕೆ ಕುರಿತು ನಿರ್ಧಾರ ತಳೆಯಲಾಗಿದೆ.

ಮತ್ತೊಂದೆಡೆ ವಿಪಕ್ಷ ನಾಯಕರ ಆಯ್ಕೆ ಕುರಿತ ಸಭೆಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಹೊರಗೆ ಹೋಗಿದ್ದಾರೆ. ಯಾರು ವಿಪಕ್ಷ ನಾಯಕ ಆಗಲಿದ್ದಾರೆ ಎಂಬ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಅವರು ಅಸಮಾನಧಾನಗೊಂಡು ಸಭೆಯಿಂದ ಹೊರನಡೆದಿದ್ದಾರೆ ಎನ್ನಲಾಗಿದ್ದು, ಬಿಜೆಪಿಯಲ್ಲಿ ವಿಪಕ್ಷ ನಾಯಕರ ವಿಚಾರವಗಿ ಭಿನ್ನಮತ ಉಂಟಾಗಿದೆ ಎಂದೂ ಹೇಳಲಾಗುತ್ತಿದೆ.

Ads on article

Advertise in articles 1

advertising articles 2

Advertise under the article

ಸುರ