-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಮದ್ಯದ ನಶೆಯಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ - ಚಾಲಕ ವಶಕ್ಕೆ

ಮಂಗಳೂರು: ಮದ್ಯದ ನಶೆಯಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ - ಚಾಲಕ ವಶಕ್ಕೆ


ಮಂಗಳೂರು: ನಗರದ ಜೆಪ್ಪು ಮಾರ್ನಮಿಕಟ್ಟೆಯಲ್ಲಿ ಮದ್ಯದ ನಶೆಯಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ ನಡೆಸಿರುವ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕಡಂಬಾರ್ ನಿವಾಸಿ ಅಕ್ಷಯ್ ಕಾರು ಚಲಾಯಿಸಿ ಸರಣಿ ಅಪಘಾತ ಎಸಗಿರುವ ಆರೋಪಿ. ಈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಕ್ಷಯ್ ಮದ್ಯದ ಮತ್ತಿನಲ್ಲಿ ಕೇರಳ ನೋಂದಾಯಿತ ಕಾರು ಚಲಾಯಿಸಿಕೊಂಡು ಬಂದಿದ್ದಾನೆ. ಜೆಪ್ಪು ಮಾರ್ನೆಮಿಕಟ್ಟೆಯಲ್ಲಿ ಎದುರಿನಿಂದ ಬರುತ್ತಿದ್ದ ಎರಡು ಕಾರು ಹಾಗೂ ಒಂದು ಸ್ಕೂಟರ್ ಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಕದ್ರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರು ಚಾಲಕ ಅಕ್ಷಯ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article