-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಶಿರಸಿಯಲ್ಲಿ ಬಸ್ - ಕಾರು ನಡುವೆ ಭೀಕರ ಅಪಘಾತ : ಕಾರಿನಲ್ಲಿದ್ದ ಮಂಗಳೂರಿನ ಐವರೂ ದಾರುಣ ಸಾವು

ಶಿರಸಿಯಲ್ಲಿ ಬಸ್ - ಕಾರು ನಡುವೆ ಭೀಕರ ಅಪಘಾತ : ಕಾರಿನಲ್ಲಿದ್ದ ಮಂಗಳೂರಿನ ಐವರೂ ದಾರುಣ ಸಾವು

ಮಂಗಳೂರು: ಸರ್ಕಾರಿ ಬಸ್‌ ಹಾಗೂ ಕಾರು ನಡುವೆ ನಿನ್ನೆ ನಡೆದ ಭೀಕರ ಅಪಘಾತದಲ್ಲಿ ಮಂಗಳೂರು ಕಿನ್ನಿಕಂಬಳ ಮೂಲದ ಐವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ನಡೆದಿದೆ. 

ಮಂಗಳೂರಿನ ಕಿನ್ನಿಕಂಬಳ ನಿವಾಸಿಗಳಾದ ರಾಮಕೃಷ್ಣ ರಾವ್ (71) ವಿದ್ಯಾಲಕ್ಷ್ಮೀ ರಾಮಕೃಷ್ಣ ರಾವ್ (67), ಪುಷ್ಪಾ ಮೋಹನ್ ರಾವ್ (62), ಸುಹಾಸ್ ಗಣೇಶ್ ರಾವ್ (30) ಮೃತ ರಾಮಕೃಷ್ಣ ರಾವ್‌ ಸಹೋದರನ ಪುತ್ರ ಅರವಿಂದ್ ಮೃತಪಟ್ಟ ದುರ್ದೈವಿಗಳು.

ಶಿರಸಿಯಲ್ಲಿ ಶುಕ್ರವಾರ ನಡೆಯಲಿದ್ದ ವಿವಾಹಕ್ಕೆಂದು ಕೈಕಂಬ ಸಮೀಪದ ಕಿನ್ನಿಕಂಬಳದಿಂದ ಶುಕ್ರವಾರ ಮುಂಜಾನೆ ಕಾರಿನಲ್ಲಿ ಹೊರಟ್ಟಿದ್ದರು. ಶಿರಸಿ ತಲುಪಲು ಇನ್ನೇನು 15 ಕಿ.ಮೀ. ಇರುವಾಗ ಹುಬಳ್ಳಿಯಿಂದ ಭಟ್ಕಳಕ್ಕೆ ಬರುತ್ತಿದ್ದ ಸರಕಾರಿ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಐವರೂ ಮೃತ ಪಟ್ಟಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ