-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಾಪು:  ಸಮಾಜ ಸೇವಕ, ನಾಟಕಕಾರ ಕಾಪು ಲೀಲಾಧರ ಶೆಟ್ಟಿ ಪತ್ನಿಯೊಂದಿಗೆ ಆತ್ಮಹತ್ಯೆ !

ಕಾಪು: ಸಮಾಜ ಸೇವಕ, ನಾಟಕಕಾರ ಕಾಪು ಲೀಲಾಧರ ಶೆಟ್ಟಿ ಪತ್ನಿಯೊಂದಿಗೆ ಆತ್ಮಹತ್ಯೆ !


ಕಾಪು: ಸಮಾಜ ಸೇವಕ, ರಾಜಕೀಯ ಮುಖಂಡ, ನಾಟಕಕಾರ ಕಾಪು ಲೀಲಾಧರ ಶೆಟ್ಟಿ (68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ (59) ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಂಪತಿಗಳಿಬ್ಬರು ಮಂಗಳವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲೀಲಾಧರ ಶೆಟ್ಟಿಯವರು ಕಾಪುವಿನಲ್ಲಿ ರಂಗ ತರಂಗ ಎಂಬ ನಾಟಕ ಸಂಸ್ಥೆಯನ್ನು ಹುಟ್ಟುಹಾಕಿ ಹಲವಾರು ನಾಟಕಗಳನ್ನು ಪ್ರದರ್ಶಿಸಿದ್ದರು. ಅವರು ಸದಾ ಸಮಾಜಪರ ಕಾಳಜಿ ಹೊಂದಿದ್ದರು. ಯಾವುದೇ ಕ್ಷಣದಲ್ಲಿಯೂ ಅಶಕ್ತರ ನೆರವಿಗೆ ಧಾವಿಸುತ್ತಿದ್ದರು. ಆದರೆ ಇತ್ತೀಚೆಗೆ ಹಣಕಾಸಿನ ತೊಂದರೆಗೊಳಗಾಗಿದ್ದರು ಎನ್ನಲಾಗಿದೆ. ಕೌಟುಂಬಿಕ‌ ಕಾರಣದಿಂದ ಮನನೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ