-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರಿಗೆ ಕೊನೆಗೂ ಬಂತು ಮೊದಲ ವಂದೇ ಭಾರತ್- ಮಂಗಳೂರು ಮಡಗಾಂವ್ ನಡುವೆ ಪ್ರಾಯೋಗಿಕ ಓಡಾಟ

ಮಂಗಳೂರಿಗೆ ಕೊನೆಗೂ ಬಂತು ಮೊದಲ ವಂದೇ ಭಾರತ್- ಮಂಗಳೂರು ಮಡಗಾಂವ್ ನಡುವೆ ಪ್ರಾಯೋಗಿಕ ಓಡಾಟ





ಮಂಗಳೂರು:   ಮಂಗಳೂರಿನಲ್ಲಿ ವಂದೇ ಭಾರತ್ ರೈಲು ಮೊದಲ ಬಾರಿಗೆ ಓಡಾಟ ನಡೆಸಲು ಸಜ್ಜಾಗಿದೆ. ಮಂಗಳೂರು ಮತ್ತು ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು  ಓಡಾಟಕ್ಕೆ ದಕ್ಷಿಣ ರೈಲ್ವೆ ಸಜ್ಜಾಗಿದ್ದು, ಇಂದು ಬೆಳಿಗ್ಗೆ ಪ್ರಾಯೋಗಿಕ ಓಡಾಟ ನಡೆಯಿತು.


ಇಂದು ಬೆಳಿಗ್ಗೆ 8.30 ಕ್ಕೆ ಮಂಗಳೂರು ಸೆಂಟ್ರಲ್ ರೈಲು‌ ನಿಲ್ದಾಣದಿಂದ‌ ಈ ಪ್ರಾಯೋಗಿಕ ರೈಲು ಪ್ರಯಾಣ ಆರಂಭಿಸಿದ್ದು ಮಧ್ಯಾಹ್ನ 1.45 ಕ್ಕೆ ಮಡಗಾಂವ್ ತಲುಪಲಿದೆ.  ಪ್ರಾಯೋಗಿಕ ಓಡಾಟದ ಸಂದರ್ಭದಲ್ಲಿ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ , ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು.




ಮಂಗಳೂರು ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್, ಉಡುಪಿ, ಕಾರವಾರ, ಮಡಗಾಂವ್ ನಲ್ಲಿ ನಿಲುಗಡೆಯಾಗಲಿದೆ. ಮಂಗಳೂರು ಮಡಗಾಂವ್ ರೈಲು ಮಂಗಳೂರು ಸೆಂಟ್ರಲ್ ನಿಂದ ಬೆಳಿಗ್ಗೆ 8.30 ಕ್ಕೆ ಹೊರಟು , ಮಧ್ಯಾಹ್ನ 1.05 ಕ್ಕೆ ಮಡಗಾಂವ್ ತಲುಪಲಿದೆ. ಉಡುಪಿ ಮತ್ತು ಕಾರವಾರದಲ್ಲಿ ನಿಲುಗಡೆ ಇರಲಿದೆ. ಸಂಜೆ 6.10 ಕ್ಕೆ ಮಡಗಾಂವ್ ನಿಂದ ಹೊರಟು ರಾತ್ರಿ‌ 10.45 ಕ್ಕೆ ಮಂಗಳೂರು‌ ಸೆಂಟ್ರಲ್ ತಲುಪಲಿದೆ.

Ads on article

Advertise in articles 1

advertising articles 2

Advertise under the article