-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪ್ರವಾದಿ ಅವಮಾನ- ಕೇರಳ ಪ್ರೊಫೆಸರ್ ಕೈ ಕತ್ತರಿಸಿದ್ದ ಕೇಸಿನ ಮುಖ್ಯ ಆರೋಪಿ 13 ವರ್ಷಗಳ ಬಳಿಕ ಸೆರೆ

ಪ್ರವಾದಿ ಅವಮಾನ- ಕೇರಳ ಪ್ರೊಫೆಸರ್ ಕೈ ಕತ್ತರಿಸಿದ್ದ ಕೇಸಿನ ಮುಖ್ಯ ಆರೋಪಿ 13 ವರ್ಷಗಳ ಬಳಿಕ ಸೆರೆ




ನವದೆಹಲಿ: 2010ರಲ್ಲಿ ಪ್ರಶ್ನೆಪತ್ರಿಕೆಯಲ್ಲಿ ಪ್ರವಾದಿ ಮೊಹಮ್ಮದ್‌ರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಪ್ರೊಫೆಸರ್ ಕೈಯನ್ನೇ ಕತ್ತರಿಸಿದ್ದ ಕೇರಳದ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ.


ಸುಮಾರು 13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಸವಾದ್‌ನನ್ನು ಕೇರಳದ ಕಣ್ಣೂರಿನಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸವಾದ್‌ನನ್ನು ಹುಡುಕಿಕೊಟ್ಟರೆ 10 ಲಕ್ಷ ರು. ಬಹುಮಾನವನ್ನೂ ಈ ಹಿಂದೆ ಘೋಷಿಸಲಾಗಿತ್ತು.




ಏನಿದು ಪ್ರಕರಣ?: ಪ್ರಶ್ನೆಪತ್ರಿಕೆಯಲ್ಲಿ ಪ್ರವಾದಿ ಮೊಹಮ್ಮದ್ ರಿಗೆ ಅಪಹಾಸ್ಯ ಮಾಡಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ನಿಷೇಧಿತ ಪಿಎಫ್‌ಐ ಮತ್ತು ಎಸ್‌ಡಿಪಿಐನ ಕೆಲ ಕಾರ್ಯಕರ್ತರು ಪ್ರೊಫೆಸರ್ ಟಿ.ಜೆ ಜೋಸೆಫ್ ಅವರ ಅಂಗೈಯನ್ನೇ ಕತ್ತರಿಸಿದ್ದರು. ಅಲ್ಲದೇ ಅವರ ಹತ್ಯೆಗೂ ಪ್ರಯತ್ನಿಸಿದ್ದರು. ಈ ಪ್ರಕರಣದಲ್ಲಿ ಒಟ್ಟು 19 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ ಮೂವರಿಗೆ ಜೀವಾವಧಿ, ಮತ್ತು 8 ಜನರಿಗೆ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ