-->
1000938341
ಗೃಹಪ್ರವೇಶಕ್ಕೆ ಮೊದಲೇ ಅಡಿಪಾಯ ಸಮೇತ ಮಗುಚಿಬಿದ್ದ ಮೂರು ಅಂತಸ್ತಿನ ಕಟ್ಟಡ - ತಪ್ಪಿದ ಭಾರೀ ಅನಾಹುತ

ಗೃಹಪ್ರವೇಶಕ್ಕೆ ಮೊದಲೇ ಅಡಿಪಾಯ ಸಮೇತ ಮಗುಚಿಬಿದ್ದ ಮೂರು ಅಂತಸ್ತಿನ ಕಟ್ಟಡ - ತಪ್ಪಿದ ಭಾರೀ ಅನಾಹುತ



ಪುದುಚೇರಿ: ನೂತನವಾಗಿ ನಿರ್ಮಾಣಗೊಂಡು ಮೂರು ಅಂತಸ್ತಿನ ಕಟ್ಟಡವೊಂದು ಗೃಹಪ್ರವೇಶಕ್ಕೂ ಮುನ್ನವೇ ಅಡಿಪಾಯ ಸಮೇತ ಕುಸಿದು ಬಿದ್ದ ಆಘಾತಕಾರಿ ಘಟನೆಯೊಂದು ಪುದುಚೇರಿಯ ಅಟ್ಟುಪಟ್ಟಿಯಲ್ಲಿರುವ ಅಂಬೇಡ್ಕ‌ರ್ ನಗರದಲ್ಲಿ ನಡೆದಿದೆ.

ಒಳಚರಂಡಿ ಕಾಲುವೆಯ ನವೀಕರಣಕ್ಕೆಂದು ಮಣ್ಣು ತೆಗೆಯುವ ಯಂತ್ರ ಬಳಸಿ ಹಳ್ಳ ತೋಡಿದ್ದೇ ಈ ಕಟ್ಟಡ ಕುಸಿಯುದಕ್ಕೆ ಕಾರಣ ಎಂದು ತಿಳಿದುಬಂದಿದೆ. ರಾಜಕಾಲುವೆಯ ಬದಿಯಲ್ಲಿಯೇ ಸರ್ಕಾರ ಮಂಜೂರು ಮಾಡಿರುವ ಸ್ಥಳದಲ್ಲಿ ಕೆಲವು ಮನೆಗಳನ್ನು ನಿರ್ಮಿಸಲಾಗಿತ್ತು. ಆದರೆ ಕಾಲುವೆ ನವೀಕರಣಕ್ಕೆ ಮಣ್ಣು ತೆಗೆಯುವ ಯಂತ್ರವನ್ನು ಬಳಸಲಾಗಿತ್ತು. ಪರಿಣಾಮ ಈ ಸ್ಥಳದಲ್ಲಿ ಭಾರೀ ಕಂಪನದ ಅನುಭವವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರೈಮಲೈ ಅಡಿಗಲ್ ಸಲೈ ಮತ್ತು ಕಾಮರಾಜ್ ಸಾಲೈಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣದ ಭಾಗವಾಗಿ ಕಾಲುವೆ ಬಳಿ ಪಿಡಬ್ಲ್ಯೂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಅಪಘಾತದ ವೇಳೆ ಮನೆ ಹಾಗೂ ಸುತ್ತಮುತ್ತಲಿನಲ್ಲಿ ಯಾರೂ ಇಲ್ಲದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುದುಚೇರಿಯ ಲೋಕೋಪಯೋಗಿ ಇಲಾಖೆ ಸಚಿವ ಕೆ.ಲಕ್ಷ್ಮೀನಾರಾಯಣ್ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ದುರ್ಘಟನೆ ಕುರಿತು ಪಿಡಬ್ಲ್ಯುಡಿ ಮತ್ತು ಕಂದಾಯ ಇಲಾಖೆ ವರದಿ ಸಲ್ಲಿಸಲಿದೆ. ಶೀಘ್ರವೇ ವಿಚಾರಣೆ ನಡೆಸಲಾಗುವುದು. ಮನೆ ಮಾಲೀಕರಿಗೆ ಪರಿಹಾರ ನೀಡುವ ಕುರಿತು ಸರಕಾರ ಚಿಂತನೆ ನಡೆಸಿದೆ ಎಂದು ಸಚಿವರು ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article