-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕುಂದಾಪುರದ ಯುವಕ ಜರ್ಮನಿಯ ಯುವತಿಯ ವಿದೇಶೀ ಪ್ರೀತಿಗೆ ಸ್ವದೇಶದಲ್ಲಿ ವಿವಾಹ ಬಂಧನ

ಕುಂದಾಪುರದ ಯುವಕ ಜರ್ಮನಿಯ ಯುವತಿಯ ವಿದೇಶೀ ಪ್ರೀತಿಗೆ ಸ್ವದೇಶದಲ್ಲಿ ವಿವಾಹ ಬಂಧನ


ಕುಂದಾಪುರ: ಪ್ರೀತಿಗೆ ಜಾತಿ, ಗಡಿ, ಧರ್ಮಗಳ ಯಾವುದೇ ಬೇಲಿಯಿಲ್ಲ ಎಂಬುವುದು ಬಹಳಷ್ಟು ಬಾರಿ ಸಾಬೀತಾಗುತ್ತಲೇ ಇದೆ. ಗಡಿ ಮೀರಿದ ಸೀಮಾ ಹೈದರ್​,  ಅಂಜು ಲವ್​ ಸ್ಟೋರಿಗಳು ನಮ್ಮ ಮುಂದೆ ನಿದರ್ಶನದಂತಿದೆ. ಇಲ್ಲೊಂದು ಅಪರೂಪದ ಲವ್​ ಸ್ಟೋರಿ ಭಾರತಕ್ಕೂ ಜರ್ಮನಿಗೂ ಸಂಬಂಧ ಬೆಸೆದಿದೆ.

ಕುಂದಾಪುರದ ಆಜ್ರಿ ಮೂಲದ ಯುವಕ ಹಾಗೂ ಜರ್ಮನಿಯ ಯುವತಿಯ ವಿವಾಹವ ಹಿಂದೂ ಸಂಪ್ರದಾಯದಂತೆ ಜ.1ರಂದು ನೆರವೇರಿತು. ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಈ ಗಡಿ ದಾಟಿದ ಪ್ರೇಮಿಗಳು ಹಸೆಮಸೆ ಏರಿದ್ದಾರೆ. ಎರಡೂ ಕುಟುಂಬಗಳ ಹಿರಿಯರು ಈ ಮದುವೆಗೆ ಸಾಕ್ಷಿಯಾದರು. 

ಕುಂದಾಪುರ ತಾಲೂಕಿನ ಗ್ರಾಮೀಣ ಭಾಗವಾದ ಆಜ್ರಿಯ ಕರಿಮನೆ ಸುವರ್ಣ ಮತ್ತು ಪಂಜು ಪೂಜಾರಿ ದಂಪತಿಯ ಪುತ್ರ ಚಂದನ್ ಹಾಗೂ ಜರ್ಮನಿಯ ಪೆಟ್ರ ಶ್ರೂಆರ್ ಮತ್ತು ಪೀಟರ್ ಶ್ರೂಆರ್ ಮುನಿಸ್ತರ್ ಯುನಿಕಬ್  ದಂಪತಿ ಪುತ್ರಿ ಕಾರಿನ್​​ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವ ಜೋಡಿ.

ಚಂದನ್ ಅವರು ಜರ್ಮನಿಯಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದಾರೆ. ಅಲ್ಲಿ ಶಿಕ್ಷಕಿಯಾಗಿರುವ ಕಾರಿನ್ ಎಂಬಾಕೆಯನ್ನು ಆತ ಪ್ರೀತಿಸುತ್ತಿದ್ದರು. ಇಬ್ಬರೂ ತಮ್ಮ ಕುಟುಂಬಿಕರನ್ನು ಒಪ್ಪಿಸಿ ಹಸೆಮಣೆ ಏರಿದ್ದಾರೆ. ಹಿಂದೂ ಸಂಪ್ರದಾಯದಂತೆ ಜ.1ರಂದು  ವಿವಾಹ ನೆರವೇರಿದ್ದು, ಎರಡು ಕಡೆಯ ಬಂಧು -ಮಿತ್ರರು ವಿವಾಹದಲ್ಲಿ ಭಾಗಿಯಾಗಿ ನವ ಜೋಡಿಗೆ ಶುಭಕೋರಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ