-->
1000938341
ಚಲಿಸುತ್ತಿದ್ದ ಬಸ್ ನಡಿಗೆ ಹಾರಿ ಪ್ರಾಣಬಿಟ್ಟ ಯುವಕ

ಚಲಿಸುತ್ತಿದ್ದ ಬಸ್ ನಡಿಗೆ ಹಾರಿ ಪ್ರಾಣಬಿಟ್ಟ ಯುವಕ


ವಿಜಯಪುರ: ಚಲಿಸುತ್ತಿದ್ದ ಬಸ್​ನಡಿಗೆ ಹಾರಿ ಹಿಂಬದಿ ಚಕ್ರದಡಿಗೆ ತಲೆಕೊಟ್ಟು ಯುವಕನೋರ್ವನು ಪ್ರಾಣಬಿಟ್ಟಿರುವ ದುರ್ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. 

ವಿಜಯಪುರ ನಗರದ ಕೇಂದ್ರ ಬಸ್​ ನಿಲ್ದಾಣದ ಬಳಿಯಿರುವ ಟಿಪ್ಪು ಸುಲ್ತಾನ್​ ವೃತ್ತದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ‌. ಮೃತಪಟ್ಟ ಯುವಕ ಹಾಸನ ಮೂಲದವನು ಎಂದು ತಿಳಿದು ಬಂದಿದೆ. ಈತ ಆತ್ಮಹತ್ಯೆ ಮಾಡಿರುವ ಸಿಸಿಟಿವಿ ದೃಶ್ಯಾವಳಿ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ರಸ್ತೆಬದಿ ಫೋನ್ ನಲ್ಲಿ ಮಾತನಾಡುತ್ತ ನಿಂತಿದ್ದ ಯುವಕ ಬಸ್​ ಬರುತ್ತಿದ್ದಂತೆ ಏಕಾಏಕಿ ತನ್ನ ಕೈಯಲ್ಲಿದ್ದ ಮೊಬೈಲ್​ ಎಸೆದು ಹಿಂಬದಿ ಚಕ್ರದಡಿಗೆ ಹಾರಿದ್ದಾನೆ. ಈ ವೇಳೆ ಈತನ ತಲೆಯ ಮೇಲೆಯೇ ಬಸ್ ನ ಹಿಂಬದಿ ಚಕ್ರ ಹರಿದು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಈ ಎಲ್ಲ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳಲೆಂದೇ ಯುವಕ ಹಿಂದಿನ ಚಕ್ರಕ್ಕೆ ತಲೆ ಕೊಟ್ಟಿದ್ಧಾನೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.

ಸ್ಥಳದಲ್ಲಿ ಯುವಕನ ಮೊಬೈಲ್​ ಪತ್ತೆಯಾಗಿದ್ದು, ಆತನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಸಂಚಾರಿ ಠಾಣೆ ಪೊಲೀಸರು ಮೃತ ಯುವಕನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.





Ads on article

Advertise in articles 1

advertising articles 2

Advertise under the article