-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಸಿಎ ವ್ಯಾಸಂಗ ಮಾಡುತ್ತಾ, ಮ್ಯೂಚ್ವಲ್ ಫಂಡ್ ವ್ಯವಹಾರ ಮಾಡುತ್ತಿದ್ದ ಯುವಕ ನೇಣಿಗೆ ಶರಣು‌

ಮಂಗಳೂರು: ಸಿಎ ವ್ಯಾಸಂಗ ಮಾಡುತ್ತಾ, ಮ್ಯೂಚ್ವಲ್ ಫಂಡ್ ವ್ಯವಹಾರ ಮಾಡುತ್ತಿದ್ದ ಯುವಕ ನೇಣಿಗೆ ಶರಣು‌


ಮಂಗಳೂರು: ಸಿಎ ವ್ಯಾಸಂಗ ಮಾಡುತ್ತಾ, ಮ್ಯೂಚ್ವಲ್ ಫಂಡ್ ವ್ಯವಹಾರ ನಡೆಸುತ್ತಿದ್ದ ಯುವಕನೋರ್ವನು ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕರಂಗಲ್ಪಾಡಿಯಲ್ಲಿ ನಡೆದಿದೆ. 

ಕರಂಗಲ್ಪಾಡಿ ನಿವಾಸಿ ಕಾರ್ಲ್ ಲಾರೆನ್ಸ್ ಅರಾನ್ (23) ಮೃತಪಟ್ಟ ಯುವಕ. 

ಸೋಮವಾರ ಷೇರ್ ಮಾರ್ಕೆಟ್ ರಜೆ ಇದ್ದ ಪರಿಣಾಮ ಕಾರ್ಲ್ ಲಾರೆನ್ಸ್ ಅರಾನ್ ಮನೆಯಲ್ಲಿಯೇ ಇದ್ದ. ಮಧ್ಯಾಹ್ನ ಊಟವಾದ ಬಳಿಕ ತಮ್ಮ ರೂಂಗೆ ಹೋದ ಕಾರ್ಲ್ ಲಾರೆನ್ಸ್ ಸಂಜೆ 4ಗಂಟೆಯಾದರೂ ಎದ್ದಿರಲಿಲ್ಲ. ಮನೆಯವರು ಆತನನ್ನು ಕರೆದರೂ ಸ್ಪಂದಿಸಿರಲಿಲ್ಲ. ಫೋನ್ ಮಾಡಿದರೆ ಸ್ವಿಚ್‌ ಆಫ್‌ ಆಗಿತ್ತು. ರಾತ್ರಿ 7 ಗಂಟೆಯಾದರೂ ಕೋಣೆಯಿಂದ ಹೊರ ಬಂದಿರದ ಹಿನ್ನೆಲೆಯಲ್ಲಿ ಮನೆಯವರು ಕದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರು ಆಗಮಿಸಿ ರಾತ್ರಿ ಬಾಗಿಲು ಒಡೆದು ನೋಡಿದಾಗ, ಕಾರ್ಲ್ ಲಾರೆನ್ಸ್ ಬೆಡ್ ಶೀಟನ್ನು ಕಿಟಕಿಗೆ ಕಟ್ಟಿ ಕತ್ತಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಲಾರೆನ್ಸ್ ತನ್ನ ತಂದೆಯೊಂದಿಗೆ ಸೇರಿಕೊಂಡು ಮ್ಯೂಚುವಲ್ ಫಂಡ್ ಸೇರಿದಂತೆ ಷೇರು ಮಾರ್ಕೆಟ್ ಬಿಸಿನೆಸ್ ನಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ. ಡೆತ್ ನೋಟ್ ಸಿಕ್ಕಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ