-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಲಾರಿಗಳ ಬ್ಯಾಟರಿ ಕಳವು ಪ್ರಕರಣ - 3.90 ಲಕ್ಷ ಮೌಲ್ಯದ ಸೊತ್ತಿನೊಂದಿಗೆ ಆರೋಪಿ ಅರೆಸ್ಟ್

ಮಂಗಳೂರು: ಲಾರಿಗಳ ಬ್ಯಾಟರಿ ಕಳವು ಪ್ರಕರಣ - 3.90 ಲಕ್ಷ ಮೌಲ್ಯದ ಸೊತ್ತಿನೊಂದಿಗೆ ಆರೋಪಿ ಅರೆಸ್ಟ್



ಮಂಗಳೂರು: ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು ಬ್ಯಾಟರಿ ಸಹಿತ 3.90ಲಕ್ಷ ರೂ. ಸೊತ್ತನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಉಳ್ಳಾಲ ತಾಲೂಕಿನ ಸೋಮೇಶ್ವರದ ತಲಪಾಡಿಯ ಕಜೆ ನಿವಾಸಿ ರಿಯಾಜ್(30) ಬಂಧಿತ ಆರೋಪಿ.

ಆರೋಪಿ ರಿಯಾಜ್ ತಲಪಾಡಿ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿಗಳನ್ನು ಕಳವು ಮಾಡಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಯಾಜ್ ತಲಪಾಡಿಯನ್ನು ನಾಟೇಕಲ್ ಬಳಿ ಪೊಲೀಸರು ಬಂಧಿಸಿದ್ದಾರೆ. ಈತ ಕಳವುಗೈದಿರುವ ಬ್ಯಾಟರಿ ಸೇರಿದಂತೆ ಕೃತ್ಯಕ್ಕೆ ಉಪಯೋಗಿಸಿರುವ ಸ್ಕೂಟರ್ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 3.90 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ