ಕಾರ್ಕಳ: ಹಣ ಹೂಡಿಕೆ ಮಾಡಲು ತಿಳಿಸಿ ಸಾಫ್ಟ್‌ವೇರ್ ಇಂಜಿನಿಯರ್ ಗೆ 7ಲಕ್ಷ ರೂ. ವಂಚನೆ

ಕಾರ್ಕಳ: ಹಣ ಹೂಡಿಕೆ ಮಾಡಿ ದುಪ್ಪಟ್ಟು ಮಾಡುವುದಾಗಿ ನಂಬಿಸಿ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಲಕ್ಷಾಂತರ ರೂ. ವಂಚನೆ ಮಾಡಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆಯಲ್ಲಿ ಸಿಸ್ಟಮ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಕಾರ್ಕಳದ ಶಿವಪ್ರಸಾದ್(26) ಎಂಬವವರು ವಂಚನೆಗೊಳಗಾದವರು.

ಹಣ ಹೂಡಿಕೆ ಮಾಡಿದ್ದಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ತಿಳಿಸಿ 2023ರ ನ.29ರಂದು ಇವರ ಮೊಬೈಲ್‌ಗೆ ಸಂದೇಶ ಬಂದಿತ್ತು. ಅದರಲ್ಲಿನ ಲಿಂಕ್ ಡೌನ್‌ಲೋಡ್ ಮಾಡಿ ಹಂತಹಂತವಾಗಿ 7,35,827ರೂ. ನಗದನ್ನು ತನ್ನ ಬ್ಯಾಂಕ್ ಖಾತೆಯಿಂದ ಆರೋಪಿಗಳು ತಿಳಿಸಿದ ಖಾತೆಗಳಿಗೆ ವರ್ಗಾವಣೆ ಮಾಡಿದ್ದರು. ಆದರೆ ಆ ಬಳಿಕ ಆರೋಪಿಗಳು ಹಣ ವಾಪಾಸ್ ನೀಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ.