-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬಂಟ್ವಾಳ: ಕರ್ನಾಟಕ ಬ್ಯಾಂಕ್ ಶಾಖೆಗೆ ಕನ್ನ ಹಾಕಿ ಕೋಟ್ಯಂತರ ಮೌಲ್ಯದ ನಗದು, ಚಿನ್ನಾಭರಣ ದರೋಡೆ

ಬಂಟ್ವಾಳ: ಕರ್ನಾಟಕ ಬ್ಯಾಂಕ್ ಶಾಖೆಗೆ ಕನ್ನ ಹಾಕಿ ಕೋಟ್ಯಂತರ ಮೌಲ್ಯದ ನಗದು, ಚಿನ್ನಾಭರಣ ದರೋಡೆ


ಬಂಟ್ವಾಳ: ಇಲ್ಲಿನ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿನ ಕರ್ನಾಟಕ ಬ್ಯಾಂಕ್ ಶಾಖೆಗೆ ನುಗ್ಗಿದ ದರೋಡೆಕೋರರು ಲಾಕರ್ ಒಡೆದು ಕೋಟ್ಯಂತರ ರೂ. ನಗ - ನಗದು ದರೋಡೆಗೈದ ಘಟನೆ ನಡೆದಿದೆ.

ಕೇರಳ-ಕರ್ನಾಟಕ ಗಡಿಭಾಗದಲ್ಲಿರುವ ಈ ಕರ್ನಾಟಕ ಬ್ಯಾಂಕ್ ಹಳೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಸುಮಾರು 20 ವರುಷ ಹಳೆಯದಾದ ಈ ಕಟ್ಟಡದ ಸುತ್ತಲೂ ಕಾಡು-ಪೊದೆಗಳು ಆವರಿಸಿದೆ. ಈ ಪೊದೆಯ ಭಾಗದಿಂದಲೇ ಕಳ್ಳರು ಒಳನುಗ್ಗಿದ್ದಾರೆ. ಗ್ಯಾಸ್ ಕಟ್ಟರ್ ಅನ್ನು ಬಳಸಿ ಬ್ಯಾಂಕ್ ನ ಹಿಂಭಾಗದ ಕಿಟಕಿ ಸರಳನ್ನು  ಮುರಿದು ಒಳನುಗ್ಗಿದ ಕಳ್ಳರು ಬ್ಯಾಂಕ್ ಲಾಕರ್ ಮುರಿದು ಕೋಟ್ಯಂತರ ರೂ. ನಗದು ಹಾಗೂ ಚಿನ್ನಾಭರಣ ದರೋಡೆಗೈದಿದ್ದಾರೆ.


ಇಂದು ಬೆಳಗ್ಗೆ ಸಿಬ್ಬಂದಿ ಇಂದು ಬೆಳಗ್ಗೆ 9.30ಗೆ ಬ್ಯಾಂಕ್ ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬ್ಯಾಂಕ್ ಕಟ್ಟಡದ ಬಗ್ಗೆ ಅರಿವಿರುವವರೇ ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.

Ads on article

Advertise in articles 1

advertising articles 2

Advertise under the article

ಸುರ