-->
1000938341
ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಆರೋಪಗಳ ಸುರಿಮಳೆಗೈದ ಜೆರೋಸಾ ಶಾಲೆಯ ಮುಖ್ಯ ಶಿಕ್ಷಕಿ

ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಆರೋಪಗಳ ಸುರಿಮಳೆಗೈದ ಜೆರೋಸಾ ಶಾಲೆಯ ಮುಖ್ಯ ಶಿಕ್ಷಕಿ

ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನಕಾರಿ ಪಾಠ ವಿಚಾರದಲ್ಲಿ ನಡೆದ ಸಂಘರ್ಷದ ವಿಚಾರವಾಗಿ ಶಾಲೆಯ ಮುಖ್ಯ ಶಿಕ್ಷಕಿ ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.

ಸೋಮವಾರದಂದು ನಡೆದ ಘಟನೆಯ ಕುರಿತು ಪತ್ರಿಕಾ ಪ್ರಕಟನೆ ನೀಡಿದ ಮುಖ್ಯಶಿಕ್ಷಕಿ ಸಿಸ್ಟರ್ ಅನಿತಾ ಅವರು ಶಾಸಕ ವೇದವ್ಯಾಸ ಕಾಮತ್ ಮೇಲೆ ಆರೋಪ ಮಾಡಿ, ಶಿಕ್ಷಕಿ ಸಿಸ್ಟರ್ ಪ್ರಭಾರನ್ನು ಅಮಾನತು ಮಾಡಲು ಶಾಸಕರು ಒತ್ತಡ ಹೇರಿದ್ದಾರೆ. ಅವರು ಯಾವುದೇ ಧರ್ಮವನ್ನು ಅವಹೇಳನಕಾರಿ ನಿಂದಿಸಿ ಪಾಠ ಮಾಡಿಲ್ಲ. ಘಟನೆಯ ಸಂಬಂಧ ಶಿಕ್ಷಕಿ ವಿರುದ್ಧ ಪೋಷಕರೊಬ್ಬರು ದೂರು ನೀಡಿದ್ದಾರೆ. ಈ ದೂರನ್ನು ಪರಿಶೀಲನೆ ಮಾಡುದಾಗಿ ಹೇಳಿದ್ದೆ. ಅಷ್ಟರಲ್ಲಾಗಲೇ ಸಾಮಾಜಿಕ ಜಾಲತಾಣದಲ್ಲಿ ಅವರು ಶಿಕ್ಷಕಿ ವಿರುದ್ಧ ಹೇಳಿರುವ ಸಂದೇಶ ರವಾನೆಯಾಗಿತ್ತು.



ಆ ಬಳಿಕ ಶಾಸಕ ವೇದವ್ಯಾಸ ಕಾಮತ್ ರೊಂದಿಗೆ ಶಾಲೆಯ ಬಳಿ ಬಂದ ಹಿಂದೂ ಕಾರ್ಯಕರ್ತರು ಶಾಲೆಯ ವಿರುದ್ಧ ಘೋಷಣೆ ಕೂಗಿದ್ದಾರೆ. ಅಲ್ಲಿ ಘೋಷಣೆ ಕೂಗಿದ ವಿದ್ಯಾರ್ಥಿಗಳು ಯಾರೂ ಆ ಪಾಠ ಮಾಡಿದಾಗ ಇದ್ದ ತರಗತಿಯ ವಿದ್ಯಾರ್ಥಿಗಳಲ್ಲ. ಪ್ರತಿಭಟನಾ ಸ್ಥಳಕ್ಕೆ ಶಿಕ್ಷಣಾಧಿಕಾರಿಗಳ ಸೂಚನೆಯಂತೆ ಭೇಟಿ ನೀಡಿದ್ದೆವು. ಈ ವೇಳೆ ಶಾಸಕ ಕಾಮತ್ ಶಿಕ್ಷಕಿಯನ್ನು ವಜಾ ಮಾಡುವಂತೆ ಬೆದರಿಕೆ ಹಾಕಿದ್ದಾರೆ. ಶಾಸಕರ ಒತ್ತಡದ ಮೇರೆಗೆ ಶಿಕ್ಷಕಿ ವಜಾ ಆದೇಶವನ್ನು ನೀಡಿದ್ದೇವೆ ಎಂದಿದ್ದಾರೆ.

ಶಿಕ್ಷಕಿ ಸಿಸ್ಟರ್ ಪ್ರಭಾ 16ವರ್ಷಗಳಿಂದ ಪಾಠ ಮಾಡುತ್ತಿದ್ದಾರೆ. ಜೆರೊಸಾ ಶಾಲೆಯಲ್ಲಿ 5 ವರ್ಷಗಳಿಂದ ಶಿಕ್ಷಕಿಯಾಗಿದ್ದಾರೆ.‌ ಈವರೆಗೆ ಇಂತಹ ಪಾಠಗಳನ್ನು ಅವರು ಮಾಡಿಲ್ಲ. ಆಡಿಯೋ ವೈರಲ್ ಮಾಡಿ ನಮ್ಮ ಶಾಲೆಯ ಹೆಸರನ್ನು ಹಾಳು ಮಾಡುವುದೇ ಹೆತ್ತವರ ಉದ್ದೇಶವಾಗಿದೆ. ಈ ಹೆತ್ತವರು ಯಾವುದೇ ಲಿಖಿತ ದೂರನ್ನು ನೀಡಿಲ್ಲ. ಆಡಿಯೋ ಹರಿಬಿಟ್ಟು ಶಾಲೆಯ ಹೆಸರನ್ನು ಕೆಡಿಸಲು ನೋಡಿದ್ದಾರೆ ಎಂದು ಸಿಸ್ಟರ್ ಅನಿತಾ ಆರೋಪಿಸಿದ್ದಾರೆ.

Ads on article

Advertise in articles 1

advertising articles 2

Advertise under the article