-->
1000938341
ಮಂಗಳೂರು: ಫುಡ್ ಪಾಯಿಸನ್ ನಿಂದ ಶ್ರೀನಿವಾಸ್  ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ

ಮಂಗಳೂರು: ಫುಡ್ ಪಾಯಿಸನ್ ನಿಂದ ಶ್ರೀನಿವಾಸ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ

ಮಂಗಳೂರು: ಫುಡ್ ಪಾಯಿಸನ್ ಗೊಳಗಾಗಿ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 

ನಗರದ ಹೊರವಲಯದ ವಳಚ್ಚಿಲ್ ನಲ್ಲಿರುವ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ಹಾಸ್ಟೆಲ್ ನಲ್ಲಿ ರಾತ್ರಿ ಊಟಕ್ಕೆಂದು ಆಹಾರ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಬೇಧಿ, ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿದ್ದಾರೆ. ತಕ್ಷಣ ವಿದ್ಯಾರ್ಥಿಗಳನ್ನು ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕೆಲವು ವಿದ್ಯಾರ್ಥಿಗಳನ್ನು ಮುಕ್ಕದಲ್ಲಿರುವ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ.


ಈ ಬಗ್ಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ, ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿರುವ 35 ವಿದ್ಯಾರ್ಥಿಗಳು ಬೇಧಿ, ಹೊಟ್ಟೆನೋವಿನಿಂದ ಅಸ್ವಸ್ಥರಾಗಿದ್ದಾರೆ. ಅಲ್ಲಿಗೆ ನಾನು ತಂಡದೊಂದಿಗೆ ಹೋಗಿ ಪರಿಶೀಲನೆ ನಡೆಸಿದ್ದೇನೆ. ಆಹಾರದ ಸ್ಯಾಂಪಲ್ ಗಳನ್ನು ಪ್ರಯೋಗಾಲಯಕ್ಕೆ‌ ಕಳುಹಿಸಲಾಗಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.

Ads on article

Advertise in articles 1

advertising articles 2

Advertise under the article