ಹೃದಯಾಘಾತಕ್ಕೆ ಕರ್ನಾಟಕದ ಉದಯೋನ್ಮುಖ ಕ್ರಿಕೆಟಿಗ ಬಲಿ


ಬೆಂಗಳೂರು: ಇತ್ತೀಚೆಗೆ ಯುವಕರನ್ನು ಹೃದಯ ಸಂಬಂಧಿ ಕಾಯಿಲೆಗಳು ಅಧಿಕವಾಗಿ ಬಾಧಿಸುತ್ತಿದೆ. ಇದೀಗ ಉದಯೋನ್ಮುಖ ಕ್ರಿಕೆಟಿಗರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಈ ಘಟನೆ ಫೆಬ್ರವರಿ 22ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಕೆ. ಹೊಯ್ಸಳ (34) ಎಂದು ಗುರುತಿಸಲಾಗಿದ್ದು, ಏಜಿಸ್‌ ಸೌತ್ ಝೂನ್ ಟೂರ್ನಿಯಲ್ಲಿದ್ದಾಗಲೇ ಈ ದುರ್ಘಟನೆ ಸಂಭವಿಸಿದೆ.

ಗುರುವಾರ ಏಜಿಸ್ ಸೌತ್ ಝೂನ್ ಟೂರ್ನಿಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಮಣಿಸುವಲ್ಲಿ ಕರ್ನಾಟಕ ತಂಡವು ಯಶಸ್ವಿಯಾಗಿತ್ತು. ಈ ವೇಳೆ ತಂಡದೊಂದಿಗೆ ಸಂಭ್ರಮಾಚರಣೆ ನಡೆಸುತ್ತಿದ್ದ ಹೊಯ್ಸಳ ಅವರಿಗೆ ಮೈದಾನದಲ್ಲೇ ಎದೆ ನೋವು ಕಾಣಿಸಿಕೊಂಡು ಪ್ರಜ್ಞೆ ತಪ್ಪಿದ್ದಾರೆ.

ತಕ್ಷಣ ತಂಡದ ಸದಸ್ಯರು ಹಾಗೂ ಮೈದಾನದ ಸಿಬ್ಬಂದಿ ಅವರನ್ನು ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮಾರ್ಗಮಧ್ಯೆಯೇ ಅವರ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. 
BREAKING NEWS
Loading latest news...
Join our WhatsApp Channel Powered By : Online Pudu