ರಂಜಾನ್ ಉಪವಾಸ ಮುಗಿಸಿ ಪಾನಿಪುರಿ ಸೇವಿಸಿ 19ಮಕ್ಕಳು ಅಸ್ವಸ್ಥ


ದಾವಣಗೆರೆ: ರಂಜಾನ್ ಉಪವಾಸದ ಬಳಿಕ ಮಸೀದಿ ಮುಂಭಾಗ ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಹರಿಹರ ತಾಲೂಕಿನ ಮಲೆಬೆನ್ನೂರು ಪಟ್ಟಣದಲ್ಲಿ ನಡೆದಿದೆ.

ಪಾನಿಪುರಿ ಸೇವಿಸಿ ಅಸ್ವಸ್ಥಗೊಂಡ 19 ಮಕ್ಕಳಲ್ಲಿ ಒಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಈ ಮಗುವನ್ನು ಬಾಪುಜಿ ಆಸ್ಪತ್ರೆಯ ಐಸಿಯುವಿನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವು ಮಕ್ಕಳನ್ನು ಮಲೆಬೆನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫ್ಟ್​ ಮಾಡಲಾಗಿದೆ.

ಮಲೆಬೆನ್ನೂರು ಪಟ್ಟಣದಲ್ಲಿ ಪಾನಿಪುರಿ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದು ಘಟನಾ ಸ್ಥಳಕ್ಕೆ ಹರಿಹರ ತಹಶೀಲ್ದಾರ್​ ಗುರುಬಸಯ್ಯ, ಹರಿಹರ ಟಿಎಚ್ ಓ, ಮಲೆಬೆನ್ನೂರ ಪಟ್ಟಣದ ಮುಖ್ಯ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹರಿಹರ ತಹಶೀಲ್ದಾರ್​ ಪಟ್ಟಣಕ್ಕೆ ಸರಬರಾಜು ಆಗುತ್ತಿರುವ ನೀರನ್ನು ಪರಿಶೀಲನೆಗೆಂದು ಕಳುಹಿಸಿದ್ದಾರೆ. 25ಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಮನೆ ಮನೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಇಲ್ಲಿನ ಪಾನಿಪುರಿ ಇನ್ನಿತರ ಫಾಸ್ಟ್ ಫುಡ್ ಅಂಗಡಿಗಳ ಮೇಲೆ ನಿಗಾ ವಹಿಸಿದ್ದಾರೆ.