-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಣಿಪಾಲ: ಬಸ್ ನಡೆಗೆ ಸಿಲುಕಿ ಮಾಲಕ ದಾರುಣ ಸಾವು‌

ಮಣಿಪಾಲ: ಬಸ್ ನಡೆಗೆ ಸಿಲುಕಿ ಮಾಲಕ ದಾರುಣ ಸಾವು‌


ಮಣಿಪಾಲ: ಗ್ಯಾರೇಜ್ ನಲ್ಲಿ ರಿಪೇರಿಗೆ ಇಟ್ಟಿದ್ದ ಬಸ್ ನ ಪರಿಶೀಲನೆಗೆ ಬಂದಿದ್ದ ಬಸ್ ಮಾಲಕರೊಬ್ಬರು ಆಕಸ್ಮಿಕವಾಗಿ ಬಸ್ ಚಕ್ರದಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ 80 ಬಡಗಬೆಟ್ಟುವಿನಲ್ಲಿ ನಡೆದಿದೆ.

ಮಾಂಡವಿ ಖಾಸಗಿ ಬಸ್ ಮಾಲಕ ದಯಾನಂದ ಶೆಟ್ಟಿ(65) ಮೃತಪಟ್ಟ ದುರ್ದೈವಿ.

ದಯಾನಂದ ಶೆಟ್ಟಿಯವರು ತಮ್ಮ ಬಸ್ಸನ್ನು 80 ಬಡಗಬೆಟ್ಟುವಿನ ಗ್ಯಾರೇಜ್‌ ವೊಂದರಲ್ಲಿ ರಿಪೇರಿಗೆ ಇಟ್ಟಿದ್ದರು. ಬಸ್ ರಿಪೇರಿ ಆಗಿರುವುದನ್ನು ನೋಡಲೆಂದು ಬುಧವಾರ ಗ್ಯಾರೇಜಿಗೆ ತೆರಳಿದ್ದರು. ಈ ವೇಳೆ ಚಾಲಕ ಬಸ್ಸನ್ನು ಏಕಾಏಕಿ ಚಲಾಯಿಸಿದ್ದಾರೆ. ಆಗ ಮುಂಭಾಗ ನಿಂತಿದ್ದ ದಯಾನಂದ ಶೆಟ್ಟಿ ಬಸ್ ಚಕ್ರದಡಿಗೆ ಸಿಲುಕಿದರೆ ಎನ್ನಲಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ದಯಾನಂದರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ