-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಳ್ತಂಗಡಿ: ಸ್ಕೂಟರ್ ಡಿಕ್ಕಿಯಾಗಿ ನಟ ವಿಜಯ ರಾಘವೇಂದ್ರ ಪತ್ನಿ ದಿ.ಸ್ಪಂದನಾ ಮಾವ ಬಲಿ

ಬೆಳ್ತಂಗಡಿ: ಸ್ಕೂಟರ್ ಡಿಕ್ಕಿಯಾಗಿ ನಟ ವಿಜಯ ರಾಘವೇಂದ್ರ ಪತ್ನಿ ದಿ.ಸ್ಪಂದನಾ ಮಾವ ಬಲಿ


ಬೆಳ್ತಂಗಡಿ: ಸ್ಕೂಟರ್ ಡಿಕ್ಕಿ ಹೊಡೆದು ನಟ ವಿಜಯ ರಾಘವೇಂದ್ರ ಪತ್ನಿ ದಿ.ಸ್ಪಂದನಾ ಮಾವ ಹೇರಾಜೆ ಶೇಖರ ಬಂಗೇರರವರು ಮೃತಪಟ್ಟ ಘಟನೆ ಗುರುವಾರ ರಾತ್ರಿ ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆಯಲ್ಲಿ ನಡೆದಿದೆ. 

ಮೃತ ಹೇರಾಜೆ ಶೇಖರ ಬಂಗೇರರವರು ದಿ.ಸ್ಪಂದನಾ ಹಾಗೂ ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರ ತಾಯಿಯ ಸಹೋದರರಾಗಿದ್ದಾರೆ.

ಹೆರಾಜೆ ಶೇಖರ ಬಂಗೇರ ಗುರುವಾರ ರಾತ್ರಿ ಸಂತೆಕಟ್ಟೆಯಲ್ಲಿ ಫುಡ್ ಪಾರ್ಸೆಲ್ ಮಾಡಿಕೊಂಡು ರಸ್ತೆ ದಾಟುತ್ತಿದ್ದರು. ಈ ವೇಳೆ ಯುವತಿಯೊಬ್ಬಳು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಶೇಖರ ಬಂಗೇರ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಗೂ ಗಂಭೀರ ಗಾಯಗೊಂಡಿದೆ.

Ads on article

Advertise in articles 1

advertising articles 2

Advertise under the article

ಸುರ