ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಭಾರೀ ಸ್ಫೋಟ - ಹಲವರಿಗೆ ಗಾಯ


ಬೆಂಗಳೂರು: ನಗರದ ಕುಂದಲಹಳ್ಳಿ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಈ ಸ್ಫೋಟದಲ್ಲಿ ಐವರು ಗಾಯಗೊಂಡಿರುವ ಶಂಕೆಯಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಎಸಿಪಿ ರೀನಾ ಸುವರ್ಣ ಹಾಗೂ ಮಾರತ್‌ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಸ್ಫೋಟದಿಂದ ಹೋಟೆಲ್‌ನಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಸಿಲಿಂಡರ್ ಸ್ಫೋಟಗೊಂಡಿರುವ ಬಗ್ಗೆ ಶಂಕೆಯಿದೆ.
BREAKING NEWS
Loading latest news...
Join our WhatsApp Channel Powered By : Online Pudu