-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಾಮಿಡಿ ಕಿಲಾಡಿ ಸ್ಪರ್ಧಿ ತುಕಲಿ ಸಂತೋಷ್ ಕಾರು ಅಪಘಾತ-ಅಪಘಾತಕ್ಕೆ ಒಳಗಾಗಿದ ಆಟೋಚಾಲಕ ಸಾವು

ಕಾಮಿಡಿ ಕಿಲಾಡಿ ಸ್ಪರ್ಧಿ ತುಕಲಿ ಸಂತೋಷ್ ಕಾರು ಅಪಘಾತ-ಅಪಘಾತಕ್ಕೆ ಒಳಗಾಗಿದ ಆಟೋಚಾಲಕ ಸಾವು


ತುಮಕೂರು:  ಕಾಮಿಡಿಯನ್ ತುಕಾಲಿ ಸಂತೋಷ್‌ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಜಗದೀಶ್ (44) ಮೃತ ದುರ್ದೈವಿ. ಈತ ಕುಣಿಗಲ್ ತಾಲ್ಲೂಕಿನ ಕೋಡಿಹಳ್ಳಿ ಪಾಳ್ಯದ ನಿವಾಸಿ.
ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ. ನಿನ್ನೆ ರಾತ್ರಿ ಹೊನ್ನೆನಹಳ್ಳಿ ಬಳಿ ತುಕಾಲಿ ಸಂತೋಷ್ ಕಾರು ಹಾಗೂ ಆಟೋ ನಡುವೆ ಅಪಘಾತ ನಡೆದಿತ್ತು. ಜಗದೀಶ್‌ ಗೆ ಗಾಯವಾಗಿತ್ತು. ಕೂಡಲೇ ಆತನನ್ನು ಕುಣಿಗಲ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು (ಮಾ.14) ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಜಗದೀಶ್ ಮೃತಪಟ್ಟಿದ್ದಾರೆ .
ತುಕಾಲಿ ಸಂತೋಷ್‌ ಅವರು ಕೆಲ ವಾರಗಳ ಹಿಂದಷ್ಟೇ ಹೊಸ ಕಿಯಾ ಸೆಲ್ಟೊಸ್ ಕಾರನ್ನು ಖರೀದಿ ಮಾಡಿದ್ದರು. ಹೊಸ ಕಾರು ಮನೆಗೆ ಬಂದು ಎರಡು ವಾರ ಕಳೆಯುವಷ್ಟರಲ್ಲೇ ಅಪಘಾತ ಸಂಭವಿಸಿದೆ. ಕುಣಿಗಲ್ ಮಾರ್ಗವಾಗಿ ತುಕಾಲಿ ಸಂತೋಷ್ ದಂಪತಿ ಹಾಸನ ಜಿಲ್ಲೆ ಹೊಳೆನರಸೀಪುರದತ್ತ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಕುಣಿಗಲ್ ಕಡೆಯಿಂದ ಕುರುಡಿಹಳ್ಳಿಗೆ ಬರುತ್ತಿದ್ದ ಆಟೋ, ತುಕಾಲಿ ಸಂತೋಷ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

Ads on article

Advertise in articles 1

advertising articles 2

Advertise under the article