-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪುತ್ತೂರು: ಅಂಗನವಾಡಿ ಬೀಗ ಒಡೆದು ಪುಟಾಣಿಗಳ ಮೊಟ್ಟೆಯಿಂದ ಆಮ್ಲೇಟ್ ಮಾಡಿ ತಿಂದ ಕಿಡಿಗೇಡಿಗಳು

ಪುತ್ತೂರು: ಅಂಗನವಾಡಿ ಬೀಗ ಒಡೆದು ಪುಟಾಣಿಗಳ ಮೊಟ್ಟೆಯಿಂದ ಆಮ್ಲೇಟ್ ಮಾಡಿ ತಿಂದ ಕಿಡಿಗೇಡಿಗಳು




ಪುತ್ತೂರು: ಇಲ್ಲಿನ ನೆಲ್ಲಿಕಟ್ಟೆಯ ಸಮೀಪದ ಅಂಗನವಾಡಿ ಕೇಂದ್ರದ ಬೀಗ ಒಡೆದು ಒಳ ನುಗ್ಗಿರುವ ಕಿಡಿಗೇಡಿಗಳು ಅಂಗನವಾಡಿ ಕೇಂದ್ರದ ಮಕ್ಕಳಿಗೆಂದು ದಾಸ್ತಾನು ಇರಿಸಿದ್ದ ಮೊಟ್ಟೆಗಳನ್ನೇ ಆಮ್ಲೆಟ್ ಮಾಡಿ ತಿಂದಿರುವ ಘಟನೆ ನಡೆದಿದೆ.


ಬೆಳಗ್ಗೆ ಅಂಗನವಾಡಿ ಕಾರ್ಯಕರ್ತೆ ಅಂಗನವಾಡಿ ಕೇಂದ್ರದ ಬಾಗಿಲು ತೆರೆಯಲೆಂದು ಬಂದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಕೇಂದ್ರದ ಬೀಗ ಒಡೆದಿರುವುದನ್ನು ಗಮನಿಸಿದ ಅವರು ಒಳಗೆ ಬಂದು ಪರಿಶೀಲನೆ ನಡೆಸಿದ್ದಾರೆ. ಅಂಗನವಾಡಿ ಒಳಗೆ ಯಾವುದೇ ಮೌಲ್ಯಯುತ ವಸ್ತುಗಳು ದೊರಕದಿದ್ದರಿಂದ ಕತ್ರಿಮ ಖದೀಮರು, ಅಂಗನವಾಡಿಯ ಮಕ್ಕಳಿಗೆ ಸೇವಿಸಲು ಎಂದು ದಾಸ್ತಾನು ಇರಿಸಲಾಗಿದ್ದ ಮೊಟ್ಟೆಗಳನ್ನು ಒಡೆದು ಆಮ್ಲೆಟ್ ಮಾಡಿ ತಿಂದಿದ್ದಾರೆ. ಅಂಗನವಾಡಿಯಲ್ಲಿ ಗ್ಯಾಸ್ ಸ್ಟೌವ್ ಮೇಲಿದ್ದ ಪಾತ್ರೆಯ ಮೇಲೆ ಆಮ್ಲೆಟ್ ತುಣುಕು ಕಂಡು ಬಂದಿದೆ. ಇದರಿಂದ ಕಿಡಿಗೇಡಿಗಳು ಆಮ್ಲೆಟ್ ಮಾಡಿ ತಿಂದಿರುವುದು ಬೆಳಕಿಗೆ ಬಂದಿದೆ. ಅಂಗನವಾಡಿ ಕೇಂದ್ರದ ಸಿಸಿ ಕ್ಯಾಮರಾವನ್ನು ಎಗರಿಸಿದ್ದಾರೆ. ಒಳಗಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿಯಾಗಿಸಿದ್ದಾರೆ ಎನ್ನಲಾಗಿದೆ.



ಪುತ್ತೂರು ಪೊಲೀಸರು ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article