-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ತುಮಕೂರು: ಸುಟ್ಟುಹೋದ ಕಾರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಪತ್ತೆ

ತುಮಕೂರು: ಸುಟ್ಟುಹೋದ ಕಾರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಪತ್ತೆ


ತುಮಕೂರು: ತಾಲೂಕಿನ ಕೋರ ಹೋಬಳಿಯ ಕುಚ್ಚಂಗಿ ಕೆರೆಯ ಬಳಿ ಕಾರೊಂದು ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅದರಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿವೆ. 

ಸುಟ್ಟು ಹೋಗಿರುವ ಕಾರಿನ ನಂಬರ್ ಪ್ಲೇಟ್ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ್ದು ಎನ್ನಲಾಗುತ್ತಿದೆ‌. ಇದರನ್ವಯ ಪೊಲೀಸರು ತನಿಖೆ ನಡೆಸಿದ್ದಾರೆ. ಕಾರು ಬೆಳ್ತಂಗಡಿ ಮೂಲದ ರಫೀಕ್ ಎಂಬವರಿಗೆ ಸೇರಿದ್ದು ಎನ್ನುವ ಮಾಹಿತಿಯಿದೆ. ಕಾರಿನಲ್ಲಿದ್ದ ಮೃತದೇಹ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ (45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್ (56) ಮತ್ತು ಶಿರ್ಲಾಲು ನಿವಾಸಿ ಇಮ್ಮಿಯಾಜ್ (34) ಎಂದು ಹೇಳಲಾಗುತ್ತಿದೆ. ಮೃತರ ಸಂಬಂಧಿಕರು ತುಮಕೂರಿಗೆ ಬಂದಿದ್ದು ಮೂವರ ಮೃತದೇಹಗಳೂ ಗುರುತು ಸಿಗದಷ್ಟು ಸುಟ್ಟು ಹೋಗಿದೆ. 

ಕಾರಿನಲ್ಲಿ ಒಟ್ಟು ಐವರು ಬೆಳ್ತಂಗಡಿಯಿಂದ ತೆರಳಿದ್ದರು ಎನ್ನಲಾಗುತ್ತಿದ್ದು ಇನ್ನಿಬ್ಬರು ಎಲ್ಲಿದ್ದಾರೆ ಎನ್ನುವ ಮಾಹಿತಿ ಲಭಿಸಿಲ್ಲ. ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಕೆ.ವಿ, ಅಡಿಷನಲ್‌ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖ‌ರ್ ಭೇಟಿ ನೀಡಿದ್ದಾರೆ. ಶ್ವಾನದಳ, ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

Ads on article

Advertise in articles 1

advertising articles 2

Advertise under the article

ಸುರ