ಪರೀಕ್ಷೆ ಬಳಿಕ ಗೋಬಿ ಮಂಚೂರಿ ನಿಷೇಧದ ಬಗ್ಗೆ ಮುಂದಿನ ಕ್ರಮ - ದಿನೇಶ್ ಗುಂಡೂರಾವ್‌


ಸುಳ್ಯ: ಗೋಬಿ ಮಂಚೂರಿ ನಿಷೇಧದ ಕುರಿತು ಪರೀಕ್ಷೆ ನಡೆಸುವಂತೆ ಹೇಳಲಾಗಿದೆ. ಅದರಂತೆ ಪರೀಕ್ಷೆ ನಡೆಸಲಾಗಿದ್ದು, ವರದಿ ಪರಿಶೀಲಿಸಿ ಯಾವ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ತಿಳಿಸಿದರು.

ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲೂ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ನಿಷೇಧ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈಗಾಗಲೇ ಗೋಬಿ ಮಂಚೂರಿ, ಬಾಂಬೆ ಮಿಠಾಯಿ ನಿಷೇಧದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ಬಗ್ಗೆ ಸ್ಪಷ್ಟತೆಯಿಲ್ಲ. ವರದಿ ನೋಡಿಕೊಂಡು ಏನು ಮಾಡಬೇಕೆಂದು ತಿಳಿಸುತ್ತೇವೆ ಎಂದರು.

BREAKING NEWS
Loading latest news...
Join our WhatsApp Channel Powered By : Online Pudu