-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮೂರು ಲಕ್ಷ ಲಂಚಕ್ಕೆ ಬೇಡಿಕೆ: ಮನೆಯಲ್ಲೇ ಲೋಕಾಯುಕ್ತ ಬಲೆಯಲ್ಲಿ ಲಾಕ್ ಆದ ಮಹಿಳಾ ತಹಶೀಲ್ದಾರ್

ಮೂರು ಲಕ್ಷ ಲಂಚಕ್ಕೆ ಬೇಡಿಕೆ: ಮನೆಯಲ್ಲೇ ಲೋಕಾಯುಕ್ತ ಬಲೆಯಲ್ಲಿ ಲಾಕ್ ಆದ ಮಹಿಳಾ ತಹಶೀಲ್ದಾರ್


ತುಮಕೂರು: ಲಂಚಕ್ಕೆ ಬೇಡಿಕೆಯಿಟ್ಟು, ಮನೆಯಲ್ಲೇ ಮೂರು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಹಿಳಾ ತಹಶೀಲ್ದಾರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕನಾಯಕನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. 

ಗೀತಾ ಎಂಬವರು ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್.


ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದ ರೈತ ಮಲ್ಲಿಕಾರ್ಜುನ್ ಎಂಬವರಿಗೆ ಸೇರಿದ‌ 33 ಗುಂಟೆ ಜಮೀನನ್ನು ಭೂ ಪರಿವರ್ತನೆ ಮಾಡಿಕೊಡಲು ತಹಶೀಲ್ದಾರ್ ಗೀತಾ 3 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಅದರಂತೆ ಬುಧವಾರ ಬೆಳಗ್ಗೆ 20 ಸಾವಿರ ರೂ. ಪಡೆದಿದ್ದರು. ಸಂಜೆ ವೇಳೆ ಮತ್ತೆ 30 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಮನೆಯಲ್ಲಿಯೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


ತುಮಕೂರು ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದಲ್ಲಿ ನಡೆದ ಕಾರ್ಯಚರಣೆ ವೇಳೆ ಗೀತಾ ಲಾಕ್ ಆಗಿದ್ದಾರೆ. ಸದ್ಯ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ರವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರೆದಿದೆ.


Ads on article

Advertise in articles 1

advertising articles 2

Advertise under the article

ಸುರ