-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸಿನಿಮಾ ನಿರ್ಮಾಪಕನ ಮನೆಯಲ್ಲಿ ಕಳವುಗೈದ 1ಕೋಟಿ ಮೌಲ್ಯದ 1.2 ಕೆ.ಜಿ. ಚಿನ್ನಾಭರಣ ವಶಕ್ಕೆ - ಕಳ್ಳ ಅಂದರ್

ಸಿನಿಮಾ ನಿರ್ಮಾಪಕನ ಮನೆಯಲ್ಲಿ ಕಳವುಗೈದ 1ಕೋಟಿ ಮೌಲ್ಯದ 1.2 ಕೆ.ಜಿ. ಚಿನ್ನಾಭರಣ ವಶಕ್ಕೆ - ಕಳ್ಳ ಅಂದರ್



ಕೋಟ: ಕೇರಳದಲ್ಲಿ ಸಿನಿಮಾ ನಿರ್ಮಾಪಕನ ಮನೆಯಲ್ಲಿ ಕಳವುಗೈದ ಚಿನ್ನಾಭರಣಗಳನ್ನು ಉಡುಪಿ-ಕಾರವಾರ ಮಾರ್ಗವಾಗಿ ಸಾಗಿಸುತ್ತಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದು ಆರೋಪಿಯಿಂದ 1.2 ಕೆ.ಜಿ. ಚಿನ್ನಾಭರಣವನ್ನು ವಶಕ್ಕೆ ಪಡೆದ ಘಟನೆ ಕೋಟ ಮೂರ್ಕೈ ಸಮೀಪ ಶನಿವಾರ ಸಂಜೆ ಸಂಭವಿಸಿದೆ.

ಬಿಹಾರ ರಾಜ್ಯದ ಸೀತಾಮರಿ ಜಿಲ್ಲೆಯ ನಿವಾಸಿ ಮೊಹಮ್ಮದ್‌ ಇರ್ಫಾನ್‌ (35) ಬಂಧಿತ ಆರೋಪಿ.

ಕೇರಳದ ಪ್ರಸಿದ್ಧ ಮಲಯಾಳ ಸಿನಿಮಾ ನಿರ್ಮಾಪಕ ಜೋಶಿ ಅವರ ಕೊಚ್ಚಿ ಪನಂಪಲ್ಲಿಯ ಮನೆಗೆ ಶನಿವಾರ ಮುಂಜಾನೆ ಯಾರೂ ಇಲ್ಲದ ವೇಳೆ ನುಗ್ಗಿದ್ದಾನೆ ಮೊಹಮ್ಮದ್‌ ಇರ್ಫಾನ್‌. ಈತ ಅಡುಗೆ ಕೋಣೆಯ ಬಾಗಿಲು ಮುರಿದು ಒಳನುಗ್ಗಿ ಕಪಾಟನ್ನು ಒಡೆದು 10 ವಜ್ರದ ಉಂಗುರ, 12 ವಜ್ರದ ಕಿವಿಯೋಲೆ, 2 ಚಿನ್ನದ ಉಂಗುರ, 10 ಚಿನ್ನದ ನೆಕ್ಲೆಸ್‌, 10 ಚಿನ್ನದ ಬಳೆ, 10 ಕೈಗಡಿಯಾರ ಸಹಿತ 1 ಕೋಟಿ ರೂ. ಮೌಲ್ಯದ ಆಭರಣಗಳನ್ನು ಕಳವುಗೈದು ಪರಾರಿಯಾಗಿದ್ದ.

ಕದ್ದ ಚಿನ್ನಾಭರಣವನ್ನು ಆರೋಪಿಯು ಬಿಹಾರಕ್ಕೆ ಸಾಗಿಸುವ ಯತ್ನದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ಕೋಟ ಪೊಲೀಸರು ಕಾರನ್ನು ತಡೆದು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯ ಉನ್ನತ ಪೊಲೀಸ್‌ ಅಧಿಕಾರಿಗಳು ಆರೋಪಿಯ ವಿಚಾರಣೆ ನಡೆಸಿದ್ದು, ಕೇರಳ ಪೊಲೀಸರು ಜಿಲ್ಲೆಗೆ ಆಗಮಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳವಾಗಿದ್ದರಿಂದ ಪೊಲೀಸ್ ದೂರು ಬಂದಿರಲಿಲ್ಲ. ಆದರೆ ಶಂಕಿತ ವಾಹನವೊಂದು ರಾಜ್ಯದಲ್ಲಿ ಸಂಚರಿಸಿದ್ದಲ್ಲದೆ ಕರ್ನಾಟಕದತ್ತ ಸಾಗಿದೆ ಎಂಬ ಮಾಹಿತಿ ಅರಿತ ಕೇರಳ ಪೊಲೀಸರು ಈ ಬಗ್ಗೆ ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಕೋಟ ಠಾಣೆಯ ಎಸ್‌ಐ ತೇಜಸ್ವಿ, ಅಪರಾಧ ವಿಭಾಗದ ಎಸ್‌ಐ ಸುಧಾ ಪ್ರಭು ಮತ್ತು ಸಿಬಂದಿಗಳಾದ ಗೋಪಾಲ ಪೂಜಾರಿ, ಪ್ರಸನ್ನ, ವಿಜಯೇಂದ್ರ ಮೊದಲಾದವರು ಸಾಸ್ತಾನ ಟೋಲ್‌ ಕೇಂದ್ರದಲ್ಲಿ ಶಂಕಿತ ಕಾರನ್ನು ತಡೆಯಲು ಯತ್ನಿಸಿದರು. ಆದರೆ ಚಾಲಕನು ಕಾರನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದನು. ಹಿಂಬಾಲಿಸಿದ ಪೊಲೀಸರು ಕೋಟ ಮೂರ್ಕೈ ಯಲ್ಲಿ ತಮ್ಮ ವಾಹನವನ್ನು ಅಡ್ಡ ನಿಲ್ಲಿಸಿ ಕಾರನ್ನು ತಡೆದರು. ಕಾರನ್ನು ಪರಿಶೀಲಿಸಿದಾಗ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಯಿತು. ವಿಚಾರಿಸಿದಾಗ ಆರೋಪಿಯು ಕೇರಳದಲ್ಲಿ ಕಳವು ಕೃತ್ಯ ಎಸಗಿ ಬಿಹಾರಕ್ಕೆ ಪರಾರಿಯಾಗುತ್ತಿರುವುದಾಗಿ ತಿಳಿಸಿದನು. ಆತನ ಮೇಲೆ ಬಿಹಾರದಲ್ಲಿ ಹಲವು ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article