-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪ್ಲಾಸ್ಟಿಕ್ ತಿಂದು ಮರಣ ಹೊಂದಿದ ಮೊಸಳೆ , ಮೊಸಳೆಯ ಹೊಟ್ಟೆಯಲ್ಲಿ ಇತ್ತು 1 ಕೆಜಿ  ಪ್ಲಾಸ್ಟಿಕ್ ತ್ಯಾಜ್ಯ

ಪ್ಲಾಸ್ಟಿಕ್ ತಿಂದು ಮರಣ ಹೊಂದಿದ ಮೊಸಳೆ , ಮೊಸಳೆಯ ಹೊಟ್ಟೆಯಲ್ಲಿ ಇತ್ತು 1 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ



ಅನಾಗರಿಕ ಮಾನವನ ಕೆಲಸದಿಂದ ಪ್ರಾಣಿಗಳ 
ಜೀವಕ್ಕೆ ಕುತ್ತುತರುತ್ತಿದೆ  ಪ್ಲಾಸ್ಟಿಕ್ ಇತ್ತೀಚೆಗೆ ಜಲಚರಗಳಿಗೂ ಕಂಟಕವಾಗುತ್ತಿದೆ.  
ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವು!
ಕಡಬ ಸಮೀಪದ ಕೊಡಿಂಬಾಳ ಗ್ರಾಮದ ವ್ಯಾಪ್ತಿಯ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್‌ ಕಾರಣ ಎಂಬವುದು ಪತ್ತೆಯಾಗಿದೆ.  ಮರಣೋತ್ತರ ಪರೀಕ್ಷೆ ವೇಳೆ ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ.ಗೂ ಅಧಿಕ ಪ್ಲಾಸ್ಟಿಕ್‌ ಮತ್ತಿತರ ತ್ಯಾಜ್ಯ ಪತ್ತೆಯಾಗಿದೆ. ಪ್ಲಾಸ್ಟಿಕ್‌ನಲ್ಲಿದ್ದ ತ್ಯಾಜ್ಯ ಅಜೀರ್ಣ ವಾದದ್ದು ಮೊಸಳೆಯ ಸಾವಿಗೆ ಕಾರಣವಾಯಿತೇ ಅಥವಾ ಪ್ಲಾಸ್ಟಿಕ್‌ ಕಾರಣವಾಯಿತೇ ಎಂಬುದು ಇನ್ನಷ್ಟು ತನಿಖೆಯಿಂದ ಹೊರಬರಬೇಕಿದೆ. 
ಪ್ಲಾಸ್ಟಿಕ್‌ ಹಾಗೂ ತ್ಯಾಜ್ಯಕ್ಕೆ ಮೊಸಳೆ ಬಲಿ!
ಈ ವಿಚಾರ ನಿಜಕ್ಕೂ ಆತಂಕಕಾರಿಯಾಗಿದ್ದು, ಇದೇ ಪ್ರಥಮ ಬಾರಿಗೆ  ಪ್ಲಾಸ್ಟಿಕ್‌ ಹಾಗೂ ತ್ಯಾಜ್ಯ ಸೇವನೆಯಿಂದ ಮೊಸಳೆ ಸತ್ತ ಪ್ರಕರಣ ಇದಾಗಿದೆ.
 ಶುಕ್ರವಾರ ಬೆಳಗ್ಗೆ ಪತ್ತೆಯಾದ ಮೊಸಳೆಯ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಡಬದ ಪಶುವೈದ್ಯಾಧಿಕಾರಿ ಡಾ.ಅಜಿತ್‌ ಅವರು ಅರಣ್ಯ ಇಲಾಖೆಯ ಏನೆಕಲ್ಲು ನರ್ಸರಿ ಪ್ರದೇಶದಲ್ಲಿ ಮೊಸಳೆಯ ಮರಣೋತ್ತರ ಪರೀಕ್ಷೆಯನ್ನು ಕಡಬದ ಪಶುವೈದ್ಯಾಧಿಕಾರಿ ಡಾ. ಅಜಿತ್‌ ನಡೆಸಿದರು. ಈ ಸಂದರ್ಭದಲ್ಲಿ  ಮೊಸಳೆ ಹೊಟ್ಟೆಯಲ್ಲಿ ಮಕ್ಕಳಿಗೆ ಬಳಸುವ ಪ್ಯಾಡ್‌ ಮಕ್ಕಳಿಗೆ ಬಳಸುವ ಪ್ಯಾಡ್‌ ಸೇರಿ ಹಲವು ತ್ಯಾಜ್ಯ ಪತ್ತೆಯಾಗಿದೆ.  ಮೊಸಳೆಗಳು ಕೂಡಾ ಅಳಿವಿನಂಚಿನಲ್ಲಿರುವ ಜೀವಿಗಳ ವರ್ಗಕ್ಕೆ ಸೇರುವುದರಿಂದ ಇನ್ನಾದರೂ ನೀರಿನ ಮೂಲಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆಯುವುದನ್ನು ನಿಲ್ಲಿಸುವುದು ಒಳಿತು
ಮೊದಲೂ ಮಾನವನಗಬೇಕು..

Ads on article

Advertise in articles 1

advertising articles 2

Advertise under the article

ಸುರ