-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಮದ್ಯದ ಮತ್ತಿನಲ್ಲಿ ಸಲೂನ್ ಮಾಲಕನಿಗೆ ಚೂರಿ ಇರಿತ - ಆರೋಪಿ ಅಂದರ್

ಮಂಗಳೂರು: ಮದ್ಯದ ಮತ್ತಿನಲ್ಲಿ ಸಲೂನ್ ಮಾಲಕನಿಗೆ ಚೂರಿ ಇರಿತ - ಆರೋಪಿ ಅಂದರ್


ಮಂಗಳೂರು: ಮದ್ಯದ ಮತ್ತಿನಲ್ಲಿ ಸಲೂನ್ ಮಾಲಕ ಎಡ್ವಿನ್ ವಿನಯ್ ಕುಮಾರ್ ಎಂಬವರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳದ ಬರಿಮಾರು ಗ್ರಾಮ ನಿವಾಸಿ ಆನಂದ ಸಪಲ್ಯ(55) ಬಂಧಿತ ಆರೋಪಿ.

ಆನಂದ ಸಪಲ್ಯ ಶನಿವಾರ ಸಂಜೆ ವೇಳೆ ಮದ್ಯದ ಮತ್ತಿನಲ್ಲಿ ನಗರದ ಬೋಳಾರದಲ್ಲಿರುವ ಸಲೂನ್ ಗೆ ಬಂದಿದ್ದಾನೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದು ಸಲೂನ್ ಮಾಲಕನ ಎಡ್ವಿನ್ ವಿನಯ್ ಕುಮಾರ್ ಎದೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಚೂರಿ ಇರಿತದ ಪರಿಣಾಮ ಗಾಯಗೊಂಡ ಎಡ್ವಿನ್ ವಿನಯ್ ಕುಮಾರ್ ಅವರನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಪರಾರಿಯಾಗಿದ್ದ ಆನಂದ ಸಪಲ್ಯನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Ads on article

Advertise in articles 1

advertising articles 2

Advertise under the article

ಸುರ