-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪತ್ತೆ - ಕೂದಳೆಲೆ ಅಂತರದಲ್ಲಿ ಬೈಕ್ ಸವಾರ ಪಾರು

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪತ್ತೆ - ಕೂದಳೆಲೆ ಅಂತರದಲ್ಲಿ ಬೈಕ್ ಸವಾರ ಪಾರು

ಬೆಳ್ತಂಗಡಿ: ಇಲ್ಲಿನ ಚಾರ್ಮಾಡಿ ಘಾಟಿಯ 9ನೇ ತಿರುವಿನಲ್ಲಿ ಒಂಟಿ ಸಲಗವೊಂದು ಪತ್ತೆಯಾಗಿದೆ. ಆನೆ ರಸ್ತೆ ದಾಟಿ ಹೋಗುತ್ತಿರುವುದು  ಬೈಕಗ ಸವಾರರೊಬ್ಬರ ವೀಡಿಯೋದಲ್ಲಿ ಸೆರೆಯಾಗಿದೆ.

ಕಳೆದೆರಡು ತಿಂಗಳುಗಳಿಂದ ‌ಈ ಭಾಗದಲ್ಲಿ ಕಾಡಾನೆಗಳ ಕಾಣ ಸಿಕ್ಕುತ್ತಿದೆ. ಇದು ಈ ಭಾಗದಲ್ಲಿ ಸಂಚರಿಸುತ್ತಿರುವ ವಾಹನ ಸವಾರರಿಗೆ ಭೀತಿ ಹುಟ್ಟಿಸಿದೆ. ಬೆಳ್ತಂಗಡಿಯ ಬಾಂಜಾರುಮಲೆ ಕಡೆಯಿಂದ ಬಂದಂತಹ ಕಾಡಾನೆಯೊಂದು ಕೆಲವು ಹೊತ್ತು ರಸ್ತೆ ಬದಿಯಲ್ಲಿ ನಿಂತುಕೊಂಡಿರುವುದು ಕಂಡು ಬಂದಿದೆ. ಬಳಿಕ ನೆರಿಯ ಕಾಡಿನತ್ತ ತೆರಳಿದೆ. ಈ ವೇಳೆ ಆನೆಯನ್ನು ಗಮನಿಸದ ಬೈಕ್ ಸವಾರರೊಬ್ಬರು ಆನೆ ದಾಟುತ್ತಿರುವ ಸಂದರ್ಭದಲ್ಲಿಯೇ ಸಂಚರಿಸಿ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.  

ಸದ್ಯ, ಕಾಡಿನ ಕೆರೆಗಳು, ನೇತ್ರಾವತಿ ನದಿ ಸಂಪೂರ್ಣ ಬತ್ತಿ ಹೋಗಿದೆ. ಕೇವಲ ಮೃತ್ಯುಂಜಯ ನದಿಯಲ್ಲಿ ಮಾತ್ರ ನೀರು ಹರಿಯುತ್ತಿದೆ. ಈ ನದಿ ಹರಿಯುವ ನೆರಿಯ, ಚಾರ್ಮಾಡಿ ಭಾಗದಲ್ಲಿ ಕಾಡಾನೆಗಳು ಆಶ್ರಯ ಪಡೆದಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆದ್ದರಿಂದ ಈ ಭಾಗದಲ್ಲಿ ಸಂಚಾರ ನಡೆಸುವ ವಾಹನ ಸವಾರರು ಜಾಗೃತೆ ವಹಿಸಬೇಕಾದ ಅಗತ್ಯವಿದೆ.

Ads on article

Advertise in articles 1

advertising articles 2

Advertise under the article

ಸುರ