-->
1000938341
ಪುತ್ತೂರು: ಯುವಕ ನಾಪತ್ತೆ

ಪುತ್ತೂರು: ಯುವಕ ನಾಪತ್ತೆ


ಪುತ್ತೂರು: ತಾಲೂಕಿನ ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿ ಯುವಕನೊಬ್ಬ ನಾಪತ್ತೆಯಾದ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಮೂಲೆ ನಿವಾಸಿ ದಿ.ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದ ಯುವಕ. ಅಡುಗೆ ಕೆಲಸಕ್ಕೆ ಸಹಾಯಕರಾಗಿ ಹೋಗುತ್ತಿದ್ದ ಇವರು, ಏ.27 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ದಿವಾಕರ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಅವರ ಚಿಕ್ಕಪ್ಪ ಸೀತಾರಾಮ ಪೂಜಾರಿಯವರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article