-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸಿಗರೇಟ್ ಸೇದುತ್ತಿದ್ದ ಮಹಿಳೆಯರನ್ನು ಗುರಾಯಿಸಿ ನೋಡುತ್ತಿದ್ದ ಯುವಕನಿಗೆ ಚೂರಿಯಿಂದ ಇರಿದು ಹತ್ಯೆ

ಸಿಗರೇಟ್ ಸೇದುತ್ತಿದ್ದ ಮಹಿಳೆಯರನ್ನು ಗುರಾಯಿಸಿ ನೋಡುತ್ತಿದ್ದ ಯುವಕನಿಗೆ ಚೂರಿಯಿಂದ ಇರಿದು ಹತ್ಯೆ


ನಾಗ್ಪುರ: ಮಹಿಳೆಯರಿಬ್ಬರು ಸಿಗರೇಟ್ ಸೇದುತ್ತಿರುವುದನ್ನ ಗುರಾಯಿಸಿ ನೋಡಿದ್ದಾನೆಂದು 28 ವರ್ಷದ ಯುವಕನನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದ ನಾಗುರದಲ್ಲಿ ನಡೆದಿದೆ.

ಶನಿವಾರ ತಡರಾತ್ರಿ ಮಹಾಲಕ್ಷ್ಮಿನಗರ ಪ್ರದೇಶದ ಪಾನ್ ಅಂಗಡಿಯ ಮುಂಭಾಗ ಜಯಶ್ರೀ ಪಂಝಡೆ ಮತ್ತು ಆಕೆಯ ಸ್ನೇಹಿತೆ ಸವಿತಾ ಸಾಯೊ ಸಿಗರೇಟ್ ಸೇದುತ್ತಿದ್ದರು.‌ ಈ ವೇಳೆ ರಂಜಿತ್ ರಾಠೋಡ್ ಎಂಬಾತ ಸಿಗರೇಟ್ ಖರೀದಿಸಲು ಅಂಗಡಿಗೆ ಬಂದಿದ್ದಾನೆ‌. ಆತ ತಮ್ಮತ್ತ ಗುರಾಯಿಸಿ ನೋಡಿದ್ದಾನೆಂಸು ಮಹಿಳೆಯರು ಕೆರಳಿದ್ದಾರೆ. ಈ ವೇಳೆ ಮಹಿಳೆಯರು ಮತ್ತು ರಂಜಿತ್ ರಾಠೋಡ್ ನಡುವೆ ವಾಗ್ವಾದ ನಡೆದಿದೆ.

ಜಯಶ್ರೀ ಪಂಝಡೆ ತನ್ನನ್ನು ನಿಂದಿಸುತ್ತಾ, ಸಿಗರೇಟಿನ ಹೊಗೆ ಬಿಡುತ್ತಿರುವುದನ್ನು ರಂಜಿತ್ ರಾಠೋಡ್ ವೀಡಿಯೊ ಚಿತ್ರೀಕರಿಸಿದ್ದಾನೆ. ಈ ವೇಳೆ ವಾಗ್ವಾದ ಹೊಡೆದಾಟಕ್ಕೆ ತಿರುಗಿತ್ತು. ಆ ಬಳಿಕ ಜಯಶ್ರೀ ಫೊನ್ ಕರೆ ಮಾಡಿ ಸ್ನೇಹಿತ ಆಕಾಶ್ ರಾವುತ್‌ಗೆ ಬರುವುದಕ್ಕೆ ಹೇಳಿದ್ದಾಳೆ. ಆತ ತನ್ನ ಗೆಳೆಯರೊಂದಿಗೆ ಸ್ಥಳಕ್ಕೆ ಆಗಮಿಸಿ ರಂಜಿತ್‌ಗೆ ಹಲವಾರು ಬಾರಿ ಚೂರಿಯಿಂದ ಇರಿದಿದ್ದಾನೆ. ಘಟನೆ ಪ್ರದೇಶದಲ್ಲಿ ಅಳವಡಿಸಿದ್ದ ಸೆಕ್ಯೂರಿಟಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಸ್ಥಳಕ್ಕೆ ಧಾವಿಸಿದ ಪೋಲಿಸರು ತೀವ್ರವಾಗಿ ಗಾಯಗೊಂಡಿದ್ದ ರಾಠೋಡ್‌ನನ್ನು ಆಸ್ಪತ್ರೆಗೆ ಸೇರಿಸಿದ್ದರಾದರೂ ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೋಲಿಸರು ಜಯಶ್ರೀ, ಸವಿತಾ ಮತ್ತು ಆಕಾಶ್ ರಾವುತ್‌ನನ್ನು ಬಂಧಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ