-->
1000938341
ಬೆಳ್ತಂಗಡಿ: ಶಿರಾಡಿ ಘಾಟ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ತಾಯಿ - ಮಗ ಬಲಿ

ಬೆಳ್ತಂಗಡಿ: ಶಿರಾಡಿ ಘಾಟ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ತಾಯಿ - ಮಗ ಬಲಿ


ಬೆಳ್ತಂಗಡಿ: ಶಿರಾಡಿ ಘಾಟ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ತಾಯಿ-ಮಗ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಪಾಣೆಮಂಗಳೂರು ಸಮೀಪದ ಬೊಂಡಾಲ ನಿವಾಸಿಗಳಾದ ಶಬೀರ್ ಎಂಬವರ ಪತ್ನಿ ಸಫಿಯಾ(50) ಹಾಗೂ ಅವರ ಪುತ್ರ ಮುಹಮ್ಮದ್ ಶಫೀಕ್(20) ಮೃತಪಟ್ಟವರು.

ಈ ತಾಯಿ-ಮಗ ಸಂಬಂಧಿಕರೋರ್ವರ ಮದುವೆ ಔತಣಕೂಟದಲ್ಲಿ ಭಾಗವಹಿಸಿ, ಪಾಣೆಮಂಗಳೂರು ಕಡೆಗೆ ಹಿಂದಿರುಗುತ್ತಿದ್ದರು. ಕಾರು ಶಿರಾಡಿ ಘಾಟ್ ನ ಕೆಂಪುಹೊಳೆ ಸಮೀಪ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್ ಲಾರಿ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಮಕ್ಕಳ ಸಹಿತ ಇತರರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ತಕ್ಷಣ ಎಲ್ಲರನ್ನೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಆದರೆ ತಾಯಿ - ಮಗ ಮೃತಪಟ್ಟಿದ್ದು, ಮೃತದೇಹವನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Ads on article

Advertise in articles 1

advertising articles 2

Advertise under the article