-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ನಿರೀಕ್ಷಣಾ ಜಾಮೀನು ನಿರಾಕರಣೆ-  ಹೆಚ್​.ಡಿ.ರೇವಣ್ಣ ವಶಕ್ಕೆ ಪಡೆದ ಎಸ್​ಐಟಿ - HD Revanna

ನಿರೀಕ್ಷಣಾ ಜಾಮೀನು ನಿರಾಕರಣೆ- ಹೆಚ್​.ಡಿ.ರೇವಣ್ಣ ವಶಕ್ಕೆ ಪಡೆದ ಎಸ್​ಐಟಿ - HD Revanna



ಬೆಂಗಳೂರು: ಮಹಿಳೆಯನ್ನು ಅಪಹರಿಸಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​.ಡಿ. ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿರುವ ಬೆನ್ನಲ್ಲೇ, ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.


ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿದ್ದ ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.


 ಜಾಮೀನು ನಿರಾಕರಣೆಯಾಗುತ್ತಿದ್ದಂತೆ ದೇವೇಗೌಡರ ನಿವಾಸಕ್ಕೆ ಹೆಚ್​.ಡಿ. ರೇವಣ್ಣ ಭೇಟಿ‌ ನೀಡಿದ್ದರು. 5-6 ಅಧಿಕಾರಿಗಳ ಎಸ್​ಐಟಿ ತಂಡ ಅಲ್ಲಿಗೆ ತೆರಳಿ ರೇವಣ್ಣರನ್ನು ವಶಕ್ಕೆ ಪಡೆದಿದೆ.


ಮಹಿಳೆಯನ್ನು ಅಪಹರಿಸಿದ ಪ್ರಕರಣಲ್ಲಿ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಶಾಸಕ ಹೆಚ್​.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿ ತೀರ್ಪು ನೀಡಿತ್ತು.


ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮೇ‌ 6ಕ್ಕೆ ನ್ಯಾಯಾಲಯವು ಮುಂದೂಡಿದೆ. ಮೈಸೂರಿನ ಕೆ.ಆರ್. ನಗರ ಠಾಣೆಯಲ್ಲಿ ಮಹಿಳೆ ಅಪಹರಣ ಕುರಿತಂತೆ ದೂರು ದಾಖಲಾಗಿತ್ತು. ಸಂತ್ರಸ್ತೆಯ ಪುತ್ರ ನನ್ನ ತಾಯಿ ಅಪಹರಣವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ದಾಖಲಾಗಿರುವ ಪ್ರಕರಣಗಳ ವಿಚಾರಣೆಗಾಗಿ ಎಸ್ಐಟಿ ರೇವಣ್ಣ ಅವರಿಗೆ ನೋಟಿಸ್​ ನೀಡಿತ್ತು.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article