-->
1000938341
Kukke Subramanya: ಸಿಡಿಲು ಬಡಿದು 10 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ವ್ಯಕ್ತಿ ಸಾವು

Kukke Subramanya: ಸಿಡಿಲು ಬಡಿದು 10 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ವ್ಯಕ್ತಿ ಸಾವು

ಮಂಗಳೂರು: ಮಳೆ ಬಂದ ಕಾರಣ ಮನೆ ಮುಂದೆ ಒಣ ಹಾಕಿದ್ದ ಅಡಕೆ ತೆಗೆಯುವ ವೇಳೆ ಸಿಡಿಲು ಬಡಿದು 10 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಮೃತಪಟ್ಟವರು. ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಂಡಿತ್ತು. ಈ ವೇಳೆ, ಮನೆಯಂಗಳದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಕೆಯನ್ನು ಸೋಮಸುಂದರ್ ಅವರು ತೆಗೆಯುವ ವೇಳೆ ಸಿಡಿಲು ಬಡಿದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.

ಸೋಮ ಸುಂದರ್ ಅವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದು, 10 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ. 

Ads on article

Advertise in articles 1

advertising articles 2

Advertise under the article