-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಾಲಭೈರವನ ಆಶೀರ್ವಾದೊಂದಿಗೆ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಕಾಲಭೈರವನ ಆಶೀರ್ವಾದೊಂದಿಗೆ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ


ವಾರಾಣಾಸಿ: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿದರು. ಕಾಶಿಯ ಕೊತ್ವಾಲ್ ಕಾಲಭೈರವನ ಆಶೀರ್ವಾದ ಪಡೆದು ನಂತರ 11.40ರ ಅಭಿಜಿನ್ ಮುಹೂರ್ತದಲ್ಲಿ ಪ್ರಧಾನಿ ನಾಮಪತ್ರ ಸಲ್ಲಿಸಿದ್ದಾರೆ. ಈ ದಿನ ಅಭಿಜಿತ್ ಮುಹೂರ್ತ, ಆನಂದ ಯೋಗ, ಸರ್ವಾರ್ಥಸಿದ್ಧಿ ಯೋಗದ ಜೊತೆಗೆ ಭೌಮ ಪುಷ್ಯ ನಕ್ಷತ್ರದ ಕಾಕತಾಳೀಯ ಸಂಗಮವಾಗಿದೆ. ಇದು ಉತ್ತಮ ಮುಹೂರ್ತದ ದಿನ ಎಂದು ಅಯೋಧ್ಯೆ ರಾಮಮಂದಿರ ಶಂಕುಸ್ಥಾಪನೆಗೆ ಶುಭ ಮುಹೂರ್ತ ನೀಡಿದ್ದ ಪಂಡಿತ್ ಗಣೇಶ್ವರ ಶಾಸ್ತ್ರಿ ದ್ರಾವಿಡ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇದೇ ಮುಹೂರ್ತದಲ್ಲಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಪ್ರಧಾನಿ ನಾಮಪತ್ರಕ್ಕೆ ರಾಮಮಂದಿರ ಶಂಕುಸ್ಥಾಪನೆಗೆ ಶುಭ ಮುಹೂರ್ತ ನೀಡಿದ್ದ ಪಂಡಿತ್ ಗಣೇಶ್ವರ ಶಾಸ್ತ್ರಿ, ಕಾಶಿ ಸಂಗೀತ ಘರಾಣೆಯ ಸೋಮಾ ಘೋಷ್, ಚಹಾ ಅಂಗಡಿ ಮಾಲೀಕ ವಿಶ್ವನಾಥ್ ಸಿಂಗ್ ಪಪ್ಪು ಅವರು ಸೂಚಕರಾಗಿ ಸಹಿ ಹಾಕಿದ್ದಾರೆ. ಇನ್ನು ಮೋದಿ ಕಾಲಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಕೆ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೂಡ ಹಾಜರಿದ್ದರು. ವಾರಾಣಸಿಯಲ್ಲಿ ಜೂ.1ರಂದು ಕಡೆಯ ಹಂತದಲ್ಲಿ ಮತದಾನ ನಡೆಯಲಿದ್ದು, ಜೂ.4ರಂದು ಫಲಿತಾಂಶ ಹೊರಬರಲಿದೆನಾಮಪತ್ರಸನ್. ಮೋದಿ ಅವರು 2014 ಮತ್ತು 2019ರಲ್ಲಿ 2 ಬಾರಿ ಇಲ್ಲಿಂದ ಗೆದ್ದು 3ನೇ ಅವಧಿಯ ಮೇಲೆ ಕಣ್ಣಿಟ್ಟಿದ್ದಾರೆ. ಇಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಅಜಯ್ ರಾಯ್ ಸತತ 3ನೇ ಬಾರಿ ಮೋದಿ ವಿರುದ್ಧ ಕಣಕ್ಕಿಳಿದಿದ್ದಾರೆ.

Ads on article

Advertise in articles 1

advertising articles 2

Advertise under the article