ದೇವರ ದೀಪ ಹಚ್ಚುವ ವೇಳೆ ಗಮನದಲ್ಲಿ ಇಟ್ಟು ಕೊಳ್ಳಬೇಕ ವಿಷಯಗಳು ಯಾವುವು



ಹಿಂದೂ ಧರ್ಮದಲ್ಲಿ ದೇವರ ದೀಪಕ್ಕೆ ತನ್ನದೇ ಆದ ಮಹತ್ವವಿದೆ. ಎಲ್ಲರ ಮನೆಯಲ್ಲಿ ದೇವರಿಗೆ ದೀಪ ಹಚ್ಚಿ ತಮ್ಮ ದಿನವನ್ನು  ಪ್ರಾರಂಭ ಮಾಡುತ್ತಾರೆ. ತುಪ್ಪ ಅಥವಾ ಎಣ್ಣೆಯ ದೀಪ ಬೆಳಗುವ ಸಂಪ್ರದಾಯ ರೂಢಿಯಲ್ಲಿದೆ. 
ಪೂಜೆ ವೇಳೆ ಯಾವ ದೀಪ ಹಚ್ಚಬೇಕು. ಎಷ್ಟು ಬತ್ತಿಯನ್ನು ಹಚ್ಚಬೇಕು ಎಂಬುದು ಸರಿಯಾಗಿ ತಿಳಿದುಕೊಳ್ಳುವುದು ಒಳ್ಳೆಯದು 

ಯಾವ ಯಾವ ದೇವರಿಗೆ ಶ್ರೇಷ್ಠ: 
ಯಾವುದೇ ರೀತಿಯ ಆರ್ಥಿಕ ಲಾಭಕ್ಕಾಗಿ ನಿಯಮಿತ ರೂಪದಲ್ಲಿ ದೇವರ ಮನೆಯಲ್ಲಿ ತುಪ್ಪದ ದೀಪವನ್ನು ಹಚ್ಚಬೇಕು. ಜಾತಕದಲ್ಲಿ ದೋಷ ಕಂಡು ಬಂದರೆ ಭೈರವನ ಮುಂದೆ ಸಾಸಿವೆ ಎಣ್ಣೆ ದೀಪವನ್ನು ಹಚ್ಚಬೇಕು.
ಭಗವಂತ ಸೂರ್ಯನನ್ನು ಪ್ರಸನ್ನಗೊಳಿಸಲು ಹಾಗೂ ಕೃಪೆಗೆ ಪಾತ್ರರಾಗಲು ಸಾಸಿವೆ ಎಣ್ಣೆ ದೀಪವನ್ನು ಹಚ್ಚುವುದು ಒಳ್ಳೆಯದು.
ಶನಿ, ಎಳ್ಳಿನ ಎಣ್ಣೆಯಲ್ಲಿ ದೀಪ ಹಚ್ಚಿದ್ರೆ ಪ್ರಸನ್ನನಾಗ್ತಾನೆ. ರಾಹು-ಕೇತು ಗ್ರಹ ದೋಷವಿದ್ದರೆ ನಾರಗಸೆ ತೈಲದಿಂದ ದೀಪ ಬೆಳಗಿ.
ಯಾವುದೇ ದೇವಿಯ ಪೂಜೆ ಮಾಡುವ ವೇಳೆ ತುಪ್ಪದ ಎಣ್ಣೆ ಬಳಸಿ.
ಭಗವಂತ ಗಣೇಶನ ಕೃಪೆ ಪ್ರಾಪ್ತಿಗಾಗಿ ಮೂರು ಬತ್ತಿಯ ತುಪ್ಪದ ದೀಪ ಬೆಳಗಿ.
ಕಾರ್ತಿಕ ದೇವರ ಕೃಪೆಗಾಗಿ ಗೋವಿನ ಶುದ್ಧ ತುಪ್ಪದ ದೀಪವನ್ನು ಬಳಸಿ.
ಲಕ್ಷ್ಮಿಯ ಪ್ರಸನ್ನತೆ ಗಳಿಸಲು ಏಳು ಬತ್ತಿಯ ದೀಪವನ್ನು ತುಪ್ಪದಲ್ಲಿ ಹಚ್ಚಿ.
ಭಗವಂತ ವಿಷ್ಣುವಿನ ಕೃಪೆ ಪಡೆಯಲು ಹತ್ತು ಬತ್ತಿಯುಳ್ಳ ದೀಪವನ್ನು ಹಚ್ಚಿ.
BREAKING NEWS
Loading latest news...
Join our WhatsApp Channel Powered By : Online Pudu