-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪುತ್ತೂರು: ಬಿಂದು ನೀರಿನ ಫ್ಯಾಕ್ಟರಿಯಲ್ಲಿ ಬೋರ್ ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ

ಪುತ್ತೂರು: ಬಿಂದು ನೀರಿನ ಫ್ಯಾಕ್ಟರಿಯಲ್ಲಿ ಬೋರ್ ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ


ಪುತ್ತೂರು: ಇಲ್ಲಿನ ಪ್ರತಿಷ್ಠಿತ ಬಿಂದು ನೀರಿನ ಫ್ಯಾಕ್ಟರಿಯಲ್ಲಿ ಬೋರ್ ವೆಲ್ ಕೊರೆಯುತ್ತಿದ್ದ ಲಾರಿಯ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆಯೊಂದು ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.

ರಾಜ್ಯದ ಪ್ರಸಿದ್ಧ ಬಿಂದು ನೀರಿನ ಫ್ಯಾಕ್ಟರಿಯವರು ತಮ್ಮ ಫ್ಯಾಕ್ಟರಿಗೆ ಸೇರಿದಂತಹ ಬೋರ್ ವೆಲ್ ಗಳನ್ನು ಫ್ಲಶ್ ಮಾಡುತ್ತಿದ್ದರು‌. ಆದರೆ‌‌ ಅನ್ಯಕೋಮಿನ ಸಂಘಟನೆಗೆ ಸೇರಿದ ಗುಂಪೊಂದು ಬೋರ್ ವೆಲ್ ಗಳನ್ನು ಫ್ಲಶ್ ಮಾಡುವ ಬದಲು ಹೊಸ ಬೋರ್ ವೆಲ್ ಕೊರೆಯಲಾಗುತ್ತಿದೆ ಎಂದು ಆರೋಪಿಸಿ ಕಲ್ಲು ತೂರಾಟ ನಡೆಸಿದೆ. ಈ ವೇಳೆ ಸಣ್ಣಪುಟ್ಟ ಮಕ್ಕಳು ಕೂಡ ಕಲ್ಲು ತೂರಾಟದಲ್ಲಿ ಭಾಗಿಯಾಗಿದ್ದರು‌. ಬಳಿಕ ಎರಡೂ ಕಡೆಗಳಿಂದ ಪರಸ್ಪರ ಕಲ್ಲು ತೂರಾಟ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಇದರ ವೀಡಿಯೋ ಈಗ ವೈರಲ್ ಆಗುತ್ತಿದೆ. ಈ ಬಗ್ಗೆ ಎರಡೂ ಗುಂಪುಗಳಿಂದಲೂ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.



Ads on article

Advertise in articles 1

advertising articles 2

Advertise under the article

ಸುರ