-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಮನೆಮೇಲೆಯೇ ತಡೆಗೋಡೆ ಕುಸಿದು ದಂಪತಿ ಸಹಿತ ಮಕ್ಕಳಿಬ್ಬರು ದುರ್ಮರಣ

ಮಂಗಳೂರು: ಮನೆಮೇಲೆಯೇ ತಡೆಗೋಡೆ ಕುಸಿದು ದಂಪತಿ ಸಹಿತ ಮಕ್ಕಳಿಬ್ಬರು ದುರ್ಮರಣ

ಮಂಗಳೂರು: ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿನಗರ ಎಂಬಲ್ಲಿ ತಡೆಗೋಡೆಯೊಂದು ಮನೆ ಮೇಲೆಯೇ ಕುಸಿದು ಬಿದ್ದು ದಂಪತಿ ಸಹಿತ ಮಕ್ಕಳಿಬ್ಬರು ಸಾವನ್ನಪ್ಪಿರುವ ದುರಂತವೊಂದು ನಡೆದಿದೆ.


ಮದನಿ ನಗರ ನಿವಾಸಿ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟ ದುರ್ದೈವಿಗಳು.


ಅಬೂಬಕ್ಕರ್ ಎಂಬವರಿಗೆ ಸೇರಿದ ಆವರಣಗೋಡೆ ಬುಧವಾರ ಬೆಳಗ್ಗೆ ಏಕಾಏಕಿ ಕುಸಿದು ಯಾಸಿರ್ ಅವರ ಮನೆಯ ಮೇಲೆಯೇ ಬಿದ್ದಿದೆ‌. ಪರಿಣಾಮ ಇವರ ಮನೆಗೋಡೆ ಕುಸಿದು ದಂಪತಿ ಹಾಗೂ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯ ಆರಂಭಿಸಿದ್ದರು. ಆದರೆ ರಕ್ಷಣೆ ಮಾಡುವ ಮೊದಲೇ ಮನೆಯೊಳಗಿದ್ದ ನಾಲ್ವರೂ ಇಹಲೋಕ ತ್ಯಜಿಸಿದ್ದಾರೆ ಈಗಾಗಲೇ ಮೂವರ ಮೃತದೇಹ ಹೊರತೆಗೆಯಲಾಗಿದೆ. ಓರ್ವ ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಯುತ್ತಿದೆ. 

Ads on article

Advertise in articles 1

advertising articles 2

Advertise under the article

ಸುರ