-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಾಸರಗೋಡು: ಭಾರೀ ಮಳೆಗೆ ಶ್ರೀಮಧೂರು ದೇವಸ್ಥಾನ ಜಲಾವೃತ

ಕಾಸರಗೋಡು: ಭಾರೀ ಮಳೆಗೆ ಶ್ರೀಮಧೂರು ದೇವಸ್ಥಾನ ಜಲಾವೃತ


ಕಾಸರಗೋಡು: ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ.

ನಿನ್ನೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಮಧೂರು ದೇವಸ್ಥಾನ ಬಳಿಯ ಮಧುವಾಹಿನಿ ನದಿ ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಒಳಗೂ ನುಗ್ಗಿದೆ. ದೇವಸ್ಥಾನದ ಪ್ರಾಂಗಣದಲ್ಲಿ ನಾಲ್ಕೈದು ಅಡಿ ನೀರು ಏರಿ ಸಂಪೂರ್ಣ ಕೆರೆಯಂತೆ ಭಾಸವಾಗುತ್ತಿದೆ. ದೇವಸ್ಥಾನ ಸುತ್ತಲೂ ಸಂಪೂರ್ಣ ಜಲಾವೃತವಾಗಿದ್ದು ದ್ವೀಪದಂತೆ ಗೋಚರಿಸುತ್ತಿದೆ.

ಪುರೋಹಿತರುಗಳು ನೀರಿನಲ್ಲಿಯೇ ನಿಂತು ದೇವರಿಗೆ ಪೂಜೆ ಸಲ್ಲಿಸುತ್ತಿರುವುದು ವೀಡಿಯೋದಲ್ಲಿ ಕಂಡು ಬರುತ್ತಿದೆ. ಅಲ್ಲದೆ ದೇವಸ್ಥಾನದ ಅಡುಗೆಕೋಣೆಯಲ್ಲಿರುವ  ಪಾತ್ರೆಗಳು ನೀರಿನಲ್ಲಿ ಚೆಲ್ಲಾಪಿಲ್ಲಿಯಾಗಿರುವುದೂ ದೃಶ್ಯದಲ್ಲಿ ಚಿತ್ರಿತವಾಗಿದೆ. ದೇವಸ್ಥಾನದ ರಸ್ತೆಯೂ, ಹೊರಭಾಗದಲ್ಲೂ ಸಂಪೂರ್ಣ ನೀರುಮಯವಾಗಿದ್ದು, ಜನರು ನೀರಿನಲ್ಲಿ ಓಡಾಟ ಮಾಡುತ್ತಿರುವುದು ನೋಡಬಹುದು.


Ads on article

Advertise in articles 1

advertising articles 2

Advertise under the article

ಸುರ