-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
SHOCKING NEWS: ಕನ್ನಡದ ಪ್ರತಿಭಾನ್ವಿತ ಯುವ ನಿರ್ದೇಶಕ ಆತ್ಮಹತ್ಯೆ: ಟಿ.ಎನ್. ಸೀತಾರಾಮ್ ಭಾವುಕರಾಗಿ ಹೇಳಿದ್ದು ಹೀಗೆ..

SHOCKING NEWS: ಕನ್ನಡದ ಪ್ರತಿಭಾನ್ವಿತ ಯುವ ನಿರ್ದೇಶಕ ಆತ್ಮಹತ್ಯೆ: ಟಿ.ಎನ್. ಸೀತಾರಾಮ್ ಭಾವುಕರಾಗಿ ಹೇಳಿದ್ದು ಹೀಗೆ..

SHOCKING NEWS: ಕನ್ನಡದ ಪ್ರತಿಭಾನ್ವಿತ ಯುವ ನಿರ್ದೇಶಕ ಆತ್ಮಹತ್ಯೆ: ಟಿ.ಎನ್. ಸೀತಾರಾಮ್ ಭಾವುಕರಾಗಿ ಹೇಳಿದ್ದು ಹೀಗೆ..




ಕನ್ನಡ ಕಿರುತೆರೆ ಲೋಕಕ್ಕೆ ಮತ್ತೊಂದು ಆಘಾತ. ಕನ್ನಡದ ಪ್ರತಿಭಾನ್ವಿತ ಯುವ ನಿರ್ದೇಶಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಚಿತ್ರರಂಗ ಅರಗಿಸಿಕೊಳ್ಳಲಾಗದ ಸಂಗತಿಯಾಗಿದೆ.


ಹಣಕಾಸಿನ ತೊಂದರೆಯೇ ಈ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ. ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡವರು. ಬೆಂಗಳೂರಿನ ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ನಟ, ನಿರ್ದೇಶಕ, ನಿರ್ಮಾಪಕರಾಗಿಯೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಚಿತ್ರ ನಿರ್ಮಾಣ ಹಾಗೂ ಸೀರಿಯಲ್ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದು ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದರು.


ಅತಿಥಿ, ಬೇರು, ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಅವರ ಕೆಲಸ ಕಾಣಬಹುದು. ಕರಿಮಣಿ,‌ ಶಾಂತಂ ಪಾಪಂ ಸೇರಿದಂತೆ ಅನೇಕ ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದಾರೆ.


ನೀನಾಸಂ ಸತೀಶ್ ಅಭಿನಯದ 'ಅಶೋಕ ಬ್ಲೇಡ್' ಚಿತ್ರ ನಿರ್ದೇಶನಕ್ಕೆ ಅವರು ಸಿದ್ಧತೆ ಮಾಡಿಕೊಂಡಿದ್ದರು. ಇನ್ನೇನು ಮುಂದಿನ ವಾರದಿಂದ ಸಿನಿಮಾದ ಚಿತ್ರೀಕರಣ ಶುರು ಮಾಡಬೇಕಿತ್ತು. ನಿರ್ಮಾಣಕ್ಕೆ ಧುಮುಕಿದ್ದು, ಸಾಲದ ಹೊರೆಯಿಂದಾಗಿ ವಿನೋದ್ ದೋಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.


ವಿನೋದ್ ದೋಂಡಾಲೆ ನಿಧನ ವಾರ್ತೆ ಕೇಳಿ ಟಿ ಎನ್‌ ಸೀತಾರಾಮ್ ಆಘಾತಗೊಂಡಿದ್ದಾರೆ. ವಿನೋದ್ ದೋಂಡಾಲೆ ಬಗ್ಗೆ ಫೇಸ್‌ಬುಕ್‌ನಲ್ಲಿ ಟಿ ಎನ್‌ ಸೀತಾರಾಮ್ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.


"ನನ್ನ ತಂಡದಲ್ಲಿ ಅನೇಕ ವರ್ಷಗಳ ಕಾಲ ನಿರ್ದೇಶನದ ವಿಭಾಗದಲ್ಲಿ ಇದ್ದ. ಅತ್ಯಂತ ಪ್ರತಿಭಾವಂತ, ಸೌಜನ್ಯದ ಗಣಿ, ವಿನೋದ ಧೋಂಡಾಲೆ ಇನ್ನಿಲ್ಲ. ಅವರ ಎರಡು ಧಾರಾವಾಹಿಗಳು ‘ಕರಿಮಣಿ’, ‘ಗಂಗೆ ಗೌರಿ’ ತುಂಬಾ ಜನಪ್ರಿಯವಾಗಿ ನಡೆಯುತ್ತಿದ್ದವು. ಇನ್ನೊಂದು ಚಿತ್ರ ಅರ್ಧದಷ್ಟು ಮುಗಿದಿದೆ. ’ನನ್ನ ‘ಮಗಳು ಜಾನಕಿ’ಯ ಮೊದಲ ಐದು ಎಪಿಸೋಡಿನ ತಾಂತ್ರಿಕ ನಿರ್ದೇಶನ ಮಾಡಿದ್ದರು. ಮುಕ್ತ, ಮುಕ್ತ ಮುಕ್ತ ಧಾರಾವಾಹಿಗಳಿಗೆ ಅವನೇ ಎಪಿಸೋಡ್ ನಿರ್ದೇಶಕ.


ಅವನು ಷಾಟ್‌ಗಳನ್ನು ವಿನ್ಯಾಸ ಮಾಡುತ್ತಿದ್ದ ಬಗೆಯೇ ಅನನ್ಯ. ’ಮರ್ಯಾದೆಗೆ ಅಂಜುವ ಮನುಷ್ಯ. ಯಾರಿಗೂ ಎಂದಿಗೂ ಜೋರಾಗಿ, ಕೋಪದಿಂದ ಮಾತನಾಡಿದ್ದು ನಾನು ಕಂಡಿಲ್ಲ. ಎಂದೂ ಗಾಸಿಪ್ ಮಾಡುವ ಜಾಯಮಾನ ಇರಲೇ ಇಲ್ಲ. ಒತ್ತಡ ಮಾಡಿಕೊಳ್ಳಬಾರದೆಂದು ನನಗೆ ಅನೇಕ ಬಾರಿ ಸಮಾಧಾನ ಹೇಳಿದ್ದ ಮನುಷ್ಯ ಇಂದು ಬಹುಶಃ ಒತ್ತಡ ತಡೆಯಲಾರದೆ ಬದುಕು ಮುಗಿಸಿಕೊಂಡುಬಿಟ್ಟ. ಚಿಕ್ಕ ವಯಸ್ಸು. ಬದುಕಿಗೊಂದು ತರ್ಕವೇ ಬೇಡವೆ.. ತೀರಾ ಸಂಕಟವಾಗುತ್ತದೆ. ಅಂತಿಮ ನಮನಗಳು ವಿನು.." ಎಂದು ಟಿ.ಎನ್‌. ಸೀತಾರಾಮ್ ಬರೆದುಕೊಂಡಿದ್ದಾರೆ.



Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article